ರಾಜ್ಯ

ಕುಮಾರಸ್ವಾಮಿ ಮಾಡಿದ ಅಕ್ರಮಗಳನ್ನೆಲ್ಲಾ ಪಟ್ಟಿ ಮಾಡಿಸ್ತಿದ್ದೀನಿ, ತನಿಖೆಯೂ ಆಗುತ್ತದೆ: ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಒಂದು ಮಾತು ಕೇಳುತ್ತೇನೆ. ನಿಮ್ಮ ಕುಟುಂಬದವರು ಈ ಜಾಗಕ್ಕೆ ಬಂದಾಗ ಎಷ್ಟು ಆಸ್ತಿ ಇತ್ತು, ಇಲ್ಲಿ ಬಂದ ನಂತರ ಎಷ್ಟು ಜಮೀನು ಪಡೆದುಕೊಂಡಿರಿ? ಯಾರ ಜಮೀನನ್ನು ಪಡೆದುಕೊಂಡಿರಿ? ಈಗ ಎಷ್ಟು ಎಕರೆ ಆಸ್ತಿಯಾಗಿದೆ? ಆ ಆಸ್ತಿಗಳು ಯಾರ ಹೆಸರಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ? ಮತ್ತೆ ಮರಳಿ ನಿಮ್ಮ ಹೆಸರಿಗೆ ಬಂದಿದ್ದು ಹೇಗೆ? ಇದಕ್ಕೆಲ್ಲಾ ನೀವು ಉತ್ತರ ನೀಡಬೇಕು. ನೀವು ಮಾಡಿರುವ ಅಕ್ರಮಗಳನ್ನು ಪಟ್ಟಿ ಮಾಡಿಸುತ್ತೇನೆ. ಅದರ ಬಗ್ಗೆಯೂ ತನಿಖೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಹಾಗೂ ಬಿಜೆಪಿಯವರ ಕುತಂತ್ರ ನಮಗೆ ತಿಳಿದಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಸುತ್ತಿರುವ ಈ ಜನಾಂದೋಲನದಲ್ಲಿ ಜನರು ನಮಗೆ ನೀಡುತ್ತಿರುವ ಬೆಂಬಲ ಅನನ್ಯ. ಜನರ ಪರವಾಗಿ ನಮ್ಮ ಈ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.

ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ಈ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್’ನವರು ಪಾದಯಾತ್ರೆ ಮೂಲಕ ಜನರಿಗೆ ಸುಳ್ಳು ಹೇಳೋಕೆ ಹೊರಟಿದ್ದಾರೆ. ಅವರ ಅವಧಿಯಲ್ಲಿ ಹಲವು ಹಗರಣಗಳು ಆಗಿವೆ. ಈ ಬಗ್ಗೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪಾದಯಾತ್ರೆ ಮಾಡುತ್ತಿರುವ ನಿಮಗೆ ಯಾವ ನೈತಿಕತೆ ಸ್ವಾಭಿಮಾನವು ಇಲ್ಲ ಎಂದು ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago