ರಾಮನಗರ: ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಒಂದು ಮಾತು ಕೇಳುತ್ತೇನೆ. ನಿಮ್ಮ ಕುಟುಂಬದವರು ಈ ಜಾಗಕ್ಕೆ ಬಂದಾಗ ಎಷ್ಟು ಆಸ್ತಿ ಇತ್ತು, ಇಲ್ಲಿ ಬಂದ ನಂತರ ಎಷ್ಟು ಜಮೀನು ಪಡೆದುಕೊಂಡಿರಿ? ಯಾರ ಜಮೀನನ್ನು ಪಡೆದುಕೊಂಡಿರಿ? ಈಗ ಎಷ್ಟು ಎಕರೆ ಆಸ್ತಿಯಾಗಿದೆ? ಆ ಆಸ್ತಿಗಳು ಯಾರ ಹೆಸರಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ? ಮತ್ತೆ ಮರಳಿ ನಿಮ್ಮ ಹೆಸರಿಗೆ ಬಂದಿದ್ದು ಹೇಗೆ? ಇದಕ್ಕೆಲ್ಲಾ ನೀವು ಉತ್ತರ ನೀಡಬೇಕು. ನೀವು ಮಾಡಿರುವ ಅಕ್ರಮಗಳನ್ನು ಪಟ್ಟಿ ಮಾಡಿಸುತ್ತೇನೆ. ಅದರ ಬಗ್ಗೆಯೂ ತನಿಖೆ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ಹಾಗೂ ಬಿಜೆಪಿಯವರ ಕುತಂತ್ರ ನಮಗೆ ತಿಳಿದಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಸುತ್ತಿರುವ ಈ ಜನಾಂದೋಲನದಲ್ಲಿ ಜನರು ನಮಗೆ ನೀಡುತ್ತಿರುವ ಬೆಂಬಲ ಅನನ್ಯ. ಜನರ ಪರವಾಗಿ ನಮ್ಮ ಈ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.
ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ಈ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್’ನವರು ಪಾದಯಾತ್ರೆ ಮೂಲಕ ಜನರಿಗೆ ಸುಳ್ಳು ಹೇಳೋಕೆ ಹೊರಟಿದ್ದಾರೆ. ಅವರ ಅವಧಿಯಲ್ಲಿ ಹಲವು ಹಗರಣಗಳು ಆಗಿವೆ. ಈ ಬಗ್ಗೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪಾದಯಾತ್ರೆ ಮಾಡುತ್ತಿರುವ ನಿಮಗೆ ಯಾವ ನೈತಿಕತೆ ಸ್ವಾಭಿಮಾನವು ಇಲ್ಲ ಎಂದು ಟೀಕಿಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…