ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ಪ್ರವೀಣ ಹಣ್ಣಿನ ವ್ಯಾಪರ ಮಾಡುತ್ತಿದ್ದ. ತಡಸ ಗ್ರಾಮದ ತಾಯವ್ವದೇವಿ ದೇವಸ್ಥಾನದ ಬಳಿ ಬಂದಿದ್ದ ಆತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹೆಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಇವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ ಪ್ರವೀಣ್ ಕುಂದಗೋಳದ 21ವರ್ಷದ ಯುವತಿ ಜೊತೆ ಸ್ನೇಹ ಬೆಳೆಸಿದ್ದರು. ಬಳಿಕ ಯುವಕ ತಮ್ಮನ್ನು ಪ್ರೀತಿಸುವಂತೆ ಕೋರಿದ್ದ. ಆದರೆ, ಯುವತಿ ತಮ್ಮ ಭವಿಷ್ಯದ ದೃಷ್ಠಿಯಿಂದ ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಪ್ರವೀಣ್ ಬೇಸರಗೊಂಡಿದ್ದರು.
ಯುವತಿ ಮುಂದೆಯೇ ಆತ್ಮಹತ್ಯೆ
ಯುವಕ ಪ್ರವೀಣ್ ಶುಕ್ರವಾರ ಬೆಳಿಗ್ಗೆ ಯುವತಿ ಭೇಟಿ ಮಾಡಿ ಪುನಃ ಕೋರಿದ್ದರು. ಅದಕ್ಕೆ ನಿರಾಕರಿಸಿದ ಯುವತಿ ನಮ್ಮದು ಸ್ನೇಹವಷ್ಟೆ ಎಂಬುದಾಗಿ ಹೇಳಿದ್ದರು. ಇದರಿಂದ ಬೇಸರಗೊಂಡ ಪ್ರವೀಣ್ ಬಾಟಲಿಯಲ್ಲಿ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡರು. ಸ್ಥಳೀಯರು ಸಹಾಯಕ್ಕೆ ಹೋಗುವಷ್ಟರಲ್ಲಿ, ಇಡೀ ದೇಹಕ್ಕೆ ಬೆಂಕಿ ವ್ಯಾಪಿಸಿತ್ತು ಎಂದು ಮೂಲಗಳೂ ತಿಳಿಸಿವೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…