ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ಪ್ರವೀಣ ಹಣ್ಣಿನ ವ್ಯಾಪರ ಮಾಡುತ್ತಿದ್ದ. ತಡಸ ಗ್ರಾಮದ ತಾಯವ್ವದೇವಿ ದೇವಸ್ಥಾನದ ಬಳಿ ಬಂದಿದ್ದ ಆತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹೆಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಇವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕ ಪ್ರವೀಣ್ ಕುಂದಗೋಳದ 21ವರ್ಷದ ಯುವತಿ ಜೊತೆ ಸ್ನೇಹ ಬೆಳೆಸಿದ್ದರು. ಬಳಿಕ ಯುವಕ ತಮ್ಮನ್ನು ಪ್ರೀತಿಸುವಂತೆ ಕೋರಿದ್ದ. ಆದರೆ, ಯುವತಿ ತಮ್ಮ ಭವಿಷ್ಯದ ದೃಷ್ಠಿಯಿಂದ ಪ್ರೀತಿಗೆ ಒಪ್ಪಿರಲಿಲ್ಲ. ಇದರಿಂದ ಪ್ರವೀಣ್ ಬೇಸರಗೊಂಡಿದ್ದರು.
ಯುವತಿ ಮುಂದೆಯೇ ಆತ್ಮಹತ್ಯೆ
ಯುವಕ ಪ್ರವೀಣ್ ಶುಕ್ರವಾರ ಬೆಳಿಗ್ಗೆ ಯುವತಿ ಭೇಟಿ ಮಾಡಿ ಪುನಃ ಕೋರಿದ್ದರು. ಅದಕ್ಕೆ ನಿರಾಕರಿಸಿದ ಯುವತಿ ನಮ್ಮದು ಸ್ನೇಹವಷ್ಟೆ ಎಂಬುದಾಗಿ ಹೇಳಿದ್ದರು. ಇದರಿಂದ ಬೇಸರಗೊಂಡ ಪ್ರವೀಣ್ ಬಾಟಲಿಯಲ್ಲಿ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡರು. ಸ್ಥಳೀಯರು ಸಹಾಯಕ್ಕೆ ಹೋಗುವಷ್ಟರಲ್ಲಿ, ಇಡೀ ದೇಹಕ್ಕೆ ಬೆಂಕಿ ವ್ಯಾಪಿಸಿತ್ತು ಎಂದು ಮೂಲಗಳೂ ತಿಳಿಸಿವೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…