ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್ ಆತಂಕ ಮನೆಮಾಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ.
ಈ ಮೂಲಕ ರಾಜ್ಯಕ್ಕೆ ಈಗ ನಿಫಾ ವೈರಸ್ ಭೀತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಕೇರಳ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾದಿಂದ ಬಲಿಯಾಗಿದ್ದಾನೆ. ಈತ ಕೇರಳದ ಮಲಪ್ಪುರಂ ಮೂಲದ ವಿದ್ಯಾರ್ಥಿಯಾಗಿದ್ದು, ಕಾಲಿಗೆ ಬಿಟ್ಟು ಬಿದ್ದ ಕಾರಣ ಆಗಸ್ಟ್.25ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದನು ಎನ್ನಲಾಗಿದೆ.
ಬಳಿಕ ಸೆಪ್ಟೆಂಬರ್ 5 ರಂದು ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡು ಆತನ ಆರೋಗ್ಯ ಗಂಭೀರ ಸ್ಥಿತಿ ತಲುಪಿತ್ತು.
ಆದರೆ ಸೆಪ್ಟೆಂಬರ್.8ರಂದು ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ.
ಈ ವಿದ್ಯಾರ್ಥಿ ಬೆಂಗಳೂರಿನಲ್ಲಿ 151 ಜನರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಪರ್ಕದಲ್ಲಿದ್ದ ಎಲ್ಲರ ವಿವರ ಕಲೆಹಾಕಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…
ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…
ಬಹುನಿರೀಕ್ಷಿತ ಧುರಂಧರ್-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್ ವಿಮರ್ಶೆ ಈಗ ಸೋಚಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…
ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.…
ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…
ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್ಮಿಲ್ನಲ್ಲಿ ಪತ್ತೆಯಾಗಿದೆ. ಮಾರ್ಚ್.17ರಂದು ರೈತ…