ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್ ಆತಂಕ ಮನೆಮಾಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ.
ಈ ಮೂಲಕ ರಾಜ್ಯಕ್ಕೆ ಈಗ ನಿಫಾ ವೈರಸ್ ಭೀತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಕೇರಳ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾದಿಂದ ಬಲಿಯಾಗಿದ್ದಾನೆ. ಈತ ಕೇರಳದ ಮಲಪ್ಪುರಂ ಮೂಲದ ವಿದ್ಯಾರ್ಥಿಯಾಗಿದ್ದು, ಕಾಲಿಗೆ ಬಿಟ್ಟು ಬಿದ್ದ ಕಾರಣ ಆಗಸ್ಟ್.25ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದನು ಎನ್ನಲಾಗಿದೆ.
ಬಳಿಕ ಸೆಪ್ಟೆಂಬರ್ 5 ರಂದು ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡು ಆತನ ಆರೋಗ್ಯ ಗಂಭೀರ ಸ್ಥಿತಿ ತಲುಪಿತ್ತು.
ಆದರೆ ಸೆಪ್ಟೆಂಬರ್.8ರಂದು ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ.
ಈ ವಿದ್ಯಾರ್ಥಿ ಬೆಂಗಳೂರಿನಲ್ಲಿ 151 ಜನರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಪರ್ಕದಲ್ಲಿದ್ದ ಎಲ್ಲರ ವಿವರ ಕಲೆಹಾಕಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…