ರಾಜ್ಯ

ಅನಿಮಲ್‌, ಟೈಗರ್‌ 3 ಪೋಸ್ಟರ್‌ ಕಿತ್ತೊಗೆದು ʼಯುವರತ್ನʼನ ಚಿತ್ರ ಬಿಡಿಸಿ ಪರಿವರ್ತನೆ ಪಾಠ ಮಾಡಿದ ಯೂತ್ಸ್‌

ʼಈ ಗೋಡೆ ಮೇಲೆ ಪೋಸ್ಟರ್‌ಗಳನ್ನು ಅಂಟಿಸಬಾರದುʼ ಎಂಬ ಬರಹ ಸರ್ವೇ ಸಾಮಾನ್ಯ. ಇದನ್ನು ಬಗೆಬಗೆಯಾಗಿ ಬೇಡಿಕೆ ರೂಪದಲ್ಲಿ ಹಾಗೂ ಎಚ್ಚರಿಕೆಯ ರೂಪದಲ್ಲಿ ಬರೆದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದನ್ನು ತಡೆಯುವ ಸಲುವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಗರದ ಹಲವು ಗೋಡೆಗಳ ಮೇಲೆ ರಾಜ್ಯದ ಹಲವಾರು ಕವಿಗಳು, ಸಾಧಕರ ಚಿತ್ರಗಳನ್ನು ಬಿಡಿಸುವ ಯೋಜನೆಯನ್ನು ಆರಂಭಿಸಿತ್ತು. ಇದು ಸಫಲತೆಯನ್ನೂ ಸಹ ಕಂಡಿತ್ತು.

ನಗರದ ಪ್ರಮುಖ ರಸ್ತೆಗಳಲ್ಲಿನ ಗೋಡೆಗಳ ಮೇಲೆ ಬಿಬಿಎಂಪಿ ಇಂತಹ ಚಿತ್ರಗಳನ್ನು ಬಿಡಿಸಿದ್ದು, ಇದರಿಂದ ವಂಚಿತವಾದ ಗೋಡೆಗಳೇ ನಗರದಲ್ಲಿ ಹೆಚ್ಚಿವೆ. ಇಂತಹ ಗೋಡೆಗಳನ್ನು ಸ್ಥಳೀಯ ಚಿತ್ರಮಂದಿರಗಳು, ಉತ್ಪನ್ನಗಳ ಮಾರಾಟಗಾರರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದು ತಮ್ಮ ಚಿತ್ರಗಳ ಹಾಗೂ ಉತ್ಪನ್ನಗಳ ಕುರಿತ ಪೋಸ್ಟರ್‌ಗಳನ್ನು ಅದರ ಮೇಲೆ ಅಂಟಿಸಿ ಪ್ರಚಾರ ಮಾಡುತ್ತಾ ಬರುತ್ತಿವೆ.

ಪೋಸ್ಟರ್‌ ಮೇಲೆ ಪೋಸ್ಟರ್‌ ಅಂಟಿಸಿ ಪರಿಸರ ಮಾಲಿನ್ಯ ಮಾಡುವುದರ ಜೊತೆಗೆ ನಗರದ ಸೌಂದರ್ಯವನ್ನೂ ಸಹ ಹಾಳು ಮಾಡಿದ್ದಾರೆ. ಇದೀಗ ಇಂತಹ ಚಟುವಟಿಕೆಗಳ ವಿರುದ್ಧ ‌ʼಯೂತ್‌ ಫಾರ್ ಪರಿವರ್ತನ್‌ʼ ಎಂಬ ತಂಡ ತೊಡೆ ತಟ್ಟಿದೆ. ವಿದ್ಯಾರ್ಥಿಗಳ ಈ ಗುಂಪು ಬೆಂಗಳೂರಿನ ಹಲವೆಡೆ ಈಗಾಗಲೇ ಹದಗೆಟ್ಟಿದ್ದ ಗೋಡೆಗಳಿಗೆ ಬಣ್ಣ ಹಚ್ಚಿ, ಸಾಧಕರ ಚಿತ್ರ ಬರೆದು ಸ್ವಚ್ಛತೆಯನ್ನು ಕಾಪಾಡಿ ಎಂಬ ಸಂದೇಶವನ್ನು ನೀಡಿದ್ದಾರೆ.

ಇದೀಗ ಚಿಕ್ಕಲಸಂದ್ರ ಎಂಬ ಪ್ರದೇಶದಲ್ಲಿ ಈ ತಂಡ ಇಂತಹದ್ದೇ ಕೆಲಸವನ್ನು ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಲ್ಲಿನ ಗೋಡೆಯೊಂದರಲ್ಲಿ ಸ್ಥಳೀಯ ಚಿತ್ರಮಂದಿರಗಳು ಅಂಟಿಸಿದ್ದ ಸಿನಿಮಾಗಳ ಪೋಸ್ಟರ್‌ ಹಾಗೂ ಇತರೆ ಉತ್ಪನ್ನಗಳ ಪೋಸ್ಟರ್‌ಗಳನ್ನು ಕಿತ್ತು ಹಾಕಿರುವ ತಂಡ ಗೋಡೆಗೆ ಬಣ್ಣ ಬಳಿದು, ಅಂದದ ಚಿತ್ರಗಳನ್ನು ಬಿಡಿಸಿ, ಜತೆಗೆ ನಟ ಪುನೀತ್‌ ರಾಜ್‌ಕುಮಾರ್‌ ಅವರ ಚಿತ್ರವನ್ನೂ ಸಹ ರಚಿಸಿ ʼಸ್ವಚ್ಛ ಬೆಂಗಳೂರು ನಮ್ಮೆಲ್ಲರ ಜವಾಬ್ದಾರಿʼ ಎಂದು ಬರೆದು ಇತರರಿಗೆ ಮಾದರಿಯಾಗಿದ್ದಾರೆ.

andolana

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

59 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago