ರಾಜ್ಯ

ಅನಿಮಲ್‌, ಟೈಗರ್‌ 3 ಪೋಸ್ಟರ್‌ ಕಿತ್ತೊಗೆದು ʼಯುವರತ್ನʼನ ಚಿತ್ರ ಬಿಡಿಸಿ ಪರಿವರ್ತನೆ ಪಾಠ ಮಾಡಿದ ಯೂತ್ಸ್‌

ʼಈ ಗೋಡೆ ಮೇಲೆ ಪೋಸ್ಟರ್‌ಗಳನ್ನು ಅಂಟಿಸಬಾರದುʼ ಎಂಬ ಬರಹ ಸರ್ವೇ ಸಾಮಾನ್ಯ. ಇದನ್ನು ಬಗೆಬಗೆಯಾಗಿ ಬೇಡಿಕೆ ರೂಪದಲ್ಲಿ ಹಾಗೂ ಎಚ್ಚರಿಕೆಯ ರೂಪದಲ್ಲಿ ಬರೆದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದನ್ನು ತಡೆಯುವ ಸಲುವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಗರದ ಹಲವು ಗೋಡೆಗಳ ಮೇಲೆ ರಾಜ್ಯದ ಹಲವಾರು ಕವಿಗಳು, ಸಾಧಕರ ಚಿತ್ರಗಳನ್ನು ಬಿಡಿಸುವ ಯೋಜನೆಯನ್ನು ಆರಂಭಿಸಿತ್ತು. ಇದು ಸಫಲತೆಯನ್ನೂ ಸಹ ಕಂಡಿತ್ತು.

ನಗರದ ಪ್ರಮುಖ ರಸ್ತೆಗಳಲ್ಲಿನ ಗೋಡೆಗಳ ಮೇಲೆ ಬಿಬಿಎಂಪಿ ಇಂತಹ ಚಿತ್ರಗಳನ್ನು ಬಿಡಿಸಿದ್ದು, ಇದರಿಂದ ವಂಚಿತವಾದ ಗೋಡೆಗಳೇ ನಗರದಲ್ಲಿ ಹೆಚ್ಚಿವೆ. ಇಂತಹ ಗೋಡೆಗಳನ್ನು ಸ್ಥಳೀಯ ಚಿತ್ರಮಂದಿರಗಳು, ಉತ್ಪನ್ನಗಳ ಮಾರಾಟಗಾರರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದು ತಮ್ಮ ಚಿತ್ರಗಳ ಹಾಗೂ ಉತ್ಪನ್ನಗಳ ಕುರಿತ ಪೋಸ್ಟರ್‌ಗಳನ್ನು ಅದರ ಮೇಲೆ ಅಂಟಿಸಿ ಪ್ರಚಾರ ಮಾಡುತ್ತಾ ಬರುತ್ತಿವೆ.

ಪೋಸ್ಟರ್‌ ಮೇಲೆ ಪೋಸ್ಟರ್‌ ಅಂಟಿಸಿ ಪರಿಸರ ಮಾಲಿನ್ಯ ಮಾಡುವುದರ ಜೊತೆಗೆ ನಗರದ ಸೌಂದರ್ಯವನ್ನೂ ಸಹ ಹಾಳು ಮಾಡಿದ್ದಾರೆ. ಇದೀಗ ಇಂತಹ ಚಟುವಟಿಕೆಗಳ ವಿರುದ್ಧ ‌ʼಯೂತ್‌ ಫಾರ್ ಪರಿವರ್ತನ್‌ʼ ಎಂಬ ತಂಡ ತೊಡೆ ತಟ್ಟಿದೆ. ವಿದ್ಯಾರ್ಥಿಗಳ ಈ ಗುಂಪು ಬೆಂಗಳೂರಿನ ಹಲವೆಡೆ ಈಗಾಗಲೇ ಹದಗೆಟ್ಟಿದ್ದ ಗೋಡೆಗಳಿಗೆ ಬಣ್ಣ ಹಚ್ಚಿ, ಸಾಧಕರ ಚಿತ್ರ ಬರೆದು ಸ್ವಚ್ಛತೆಯನ್ನು ಕಾಪಾಡಿ ಎಂಬ ಸಂದೇಶವನ್ನು ನೀಡಿದ್ದಾರೆ.

ಇದೀಗ ಚಿಕ್ಕಲಸಂದ್ರ ಎಂಬ ಪ್ರದೇಶದಲ್ಲಿ ಈ ತಂಡ ಇಂತಹದ್ದೇ ಕೆಲಸವನ್ನು ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಲ್ಲಿನ ಗೋಡೆಯೊಂದರಲ್ಲಿ ಸ್ಥಳೀಯ ಚಿತ್ರಮಂದಿರಗಳು ಅಂಟಿಸಿದ್ದ ಸಿನಿಮಾಗಳ ಪೋಸ್ಟರ್‌ ಹಾಗೂ ಇತರೆ ಉತ್ಪನ್ನಗಳ ಪೋಸ್ಟರ್‌ಗಳನ್ನು ಕಿತ್ತು ಹಾಕಿರುವ ತಂಡ ಗೋಡೆಗೆ ಬಣ್ಣ ಬಳಿದು, ಅಂದದ ಚಿತ್ರಗಳನ್ನು ಬಿಡಿಸಿ, ಜತೆಗೆ ನಟ ಪುನೀತ್‌ ರಾಜ್‌ಕುಮಾರ್‌ ಅವರ ಚಿತ್ರವನ್ನೂ ಸಹ ರಚಿಸಿ ʼಸ್ವಚ್ಛ ಬೆಂಗಳೂರು ನಮ್ಮೆಲ್ಲರ ಜವಾಬ್ದಾರಿʼ ಎಂದು ಬರೆದು ಇತರರಿಗೆ ಮಾದರಿಯಾಗಿದ್ದಾರೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago