ರಾಜ್ಯ

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ.

ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದ್ದು, ಯೋಜನೆಯ ಪ್ರಗತಿ ವಿವರಗಳನ್ನು ವಿವರಿಸಿದ್ದಾರೆ. ಒಟ್ಟು 2.84 ಲಕ್ಷ ನೋಂದಾಯಿತ ನಿರುದ್ಯೋಗಿ ಫಲಾನುಭವಿಗಳಲ್ಲಿ ಉದ್ಯೋಗ ಪಡೆದವರ ಸಂಖ್ಯೆ ಬಹಳ ಕಡಿಮೆ ಇರುವುದು ಸರ್ಕಾರದ ಉತ್ತರದ ಮೂಲಕ ದೃಢಪಟ್ಟಿದೆ.

ಇದನ್ನು ಓದಿ : ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಸರ್ಕಾರದ ಮಾಹಿತಿಯ ಪ್ರಕಾರ, ಯುವನಿಧಿ ಯೋಜನೆ ಪ್ರಾರಂಭವಾದ ನಂತರ ಈವರೆಗೆ ಕೇವಲ 2,327 ಫಲಾನುಭವಿಗಳು ಉದ್ಯೋಗ ಅಥವಾ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ಅಂದರೆ, ಯುವನಿಧಿ ಯೋಜನೆಗೆ ನೋಂದಣಿ ಮಾಡಿದ ಫಲಾನುಭವಿಗಳನ್ನು ಆದ್ಯತೆ ಆಧಾರದ ಮೇಲೆ 17,715 ಫಲಾನುಭವಿಗಳನ್ನು ಸಂಪರ್ಕಿಸಲಾಗಿತ್ತು. ಅವರಲ್ಲಿ 2,327 ಫಲಾನುಭವಿಗಳಿಗೆ ಉದ್ಯೋಗ ಲಭಿಸಿರುವುದು ಖಾತ್ರಿಯಾಗಿದೆ. ಹೀಗಾಗಿ ಈ ಫಲಾನುಭವಿಗಳು ಉದ್ಯೋಗ ಕಂಡುಕೊಂಡ ಕಾರಣ ಇವರಿಗೆ ಮಾಸಿಕ ಭತ್ಯೆಯನ್ನು ನಿಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಯೋಜನೆಯ ಫಲಾನುಭವಿಗಳಲ್ಲಿ ಬಳ್ಳಾರಿ ಜಿಲ್ಲೆಯ ಒಬ್ಬರು ಮರಣ ಹೊಂದಿದ್ದಾರೆ ಎಂದು ಸಹ ಸಚಿವರು ಇದೇ ವೇಳೆ ದೃಢಪಡಿಸಿದ್ದಾರೆ.

ಯುವ ಸಮೂಹಕ್ಕೆ ಬೆಳಕಾದ ಯುವನಿಧಿ : ದಿನೇಶ್‌ ಗೂಳಿಗೌಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ರಾಜ್ಯದ ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರಿಗೂ ಸಾಕಷ್ಟು ಅನುಕೂಲವಾಗಿದೆ. ಇದರಲ್ಲಿ ಭಾರತದ ಶಕ್ತಿಯಾಗಿರುವ ಯುವ ಸಮೂಹಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಮಹತ್ವ ಎಲ್ಲರಿಗೂ ಅರಿವಾಗುತ್ತಿದೆ. ಇಂದು ಲಕ್ಷಾಂತರ ಮಂದಿ ಪದವಿ ಪೂರೈಸಿ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೆಲವರಿಗೆ ಉದ್ಯೋಗ ಹುಡುಕಲು ಪಟ್ಟಣಗಳಿಗೆ ಬಂದು ನೆಲೆಗೊಳ್ಳಲೂ ಹಣಕಾಸಿನ ಸೌಲಭ್ಯ ಇರುವುದಿಲ್ಲ. ಅಲ್ಲದೆ, ಅವರ ಆರ್ಥಿಕ ಸ್ವಾವಲಂಬನೆಯೂ ಸಾಧ್ಯವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಯುವನಿಧಿ ಗ್ಯಾರಂಟಿ ಯೋಜನೆಯು ಲಕ್ಷಾಂತರ ಯುವಜನಕ್ಕೆ ಬೆಳಕಾಗಿದೆ ಎಂಬುದು ಈ ಅಂಕಿಅಂಶಗಳಿಂದ ದೃಢಪಟ್ಟಿದೆ. ನಮ್ಮ ಕಾಂಗ್ರೆಸ್‌ ಸರ್ಕಾರ ಸದಾ ಜನಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಆರಂಭವಾಗಿದ್ದ ಯುವನಿಧಿ ಯೋಜನೆ

ಯುವನಿಧಿ ಯೋಜನೆ ಕರ್ನಾಟಕದ ನಿರುದ್ಯೋಗಿ ಪದವೀಧರರು (₹3,000/ತಿಂಗಳು) ಮತ್ತು ಡಿಪ್ಲೊಮಾ ಹೊಂದಿದವರಿಗೆ (₹1,500/ತಿಂಗಳು) ಎರಡು ವರ್ಷಗಳವರೆಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯು 2022-23ನೇ ಸಾಲಿನಲ್ಲಿ ಹಾಗೂ ಬಳಿಕ ಉತ್ತೀರ್ಣರಾದ ಹಾಗೂ ಬಳಿಕ 6 ತಿಂಗಳಿಂದ ಉದ್ಯೋಗವಿಲ್ಲದ ಯುವಕರಿಗೆ ಅನ್ವಯವಾಗುತ್ತದೆ. 2023ರ ಡಿಸೆಂಬರ್ 26ರಂದು ಅರ್ಜಿ ಸಲ್ಲಿಕೆ ಆರಂಭವಾಗಿ, ವಿವೇಕಾನಂದ ಜಯಂತಿ ದಿನವಾದ 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಚಾಲನೆಗೊಂಡಿತು. ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಾವತಿಸಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago