ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆಗಳು ನಡೆಯದಂತೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಈ ಕುರಿತಂತೆ ಸಂವಿಧಾನವದ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಈ ಸಂಬಂಧ ಗುರುವಾರ ಪ್ರಕಟಣೆ ಹೊರಡಿಸಿರುವ ಸಚಿವರು, ಚಿಕ್ಕಮಗಳೂರು ಜಿಲ್ಲೆಯ ಗೇರಮರಡಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಸಂಬಂಧ ಇವು ಸಂವಿಧಾನದ ಸಮಾನತೆ ಮತ್ತು ಭ್ರಾತೃತ್ವದ ಆಯಗಳಿಗೆ ವಿರುದ್ಧವಾಗಿದೆ. ಶೂ ಕೊಂಡುಕೊಳ್ಳಲು ಆಗದಿರುವ ಬಡ ವರ್ಗಗಳ ಜನರಿರುವ ಸಮುದಾಯಗಳಲ್ಲೇ ಶೂ ಧರಿಸಿ ನಡೆಯುವುದು ಮೈಲಿಗೆಯಾಗಲಿದೆ ಎಂಬುದು ತಲೆ ತಗ್ಗಿಸುವಂತ ಸಂಗತಿಯಾಗಿದೆ ಎಂದಿದ್ದಾರೆ.
ಇದರೊಂದಿಗೆ ಮೈಸೂರು ಜಿಲ್ಲೆಯ ಕೆಂಚಲಗೂಡು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ನುಗ್ಗಿದರು ಎಂದು ಪ್ರತ್ಯೇಕ ದೇವಾಲಯ ನಿರ್ಮಾಣ ಮಾಡುವ ಮನಸ್ಥಿತಿ ಕಂಡು ನನ್ನ ಮನಸ್ಸು ಘಾಸಿಗೊಂಡಿದೆ
ಅಂಬೇಡ್ಕರ್ ಹೇಳಿದಂತೆ ನಮ್ಮ ಜನರು ಅದರಲ್ಲೂ ಪ್ರಮುಖವಾಗಿ ಯುವಕರು ಮೌಢ್ಯತೆಯಿಂದ ಮೊದಲು ಹೊರಬರಬೇಕಿದೆ. ಉತ್ತಮ ಶಿಕ್ಷಣ ಪಡೆದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬೆಳೆಯುವತ್ತಾ ಗಮನ ನೀಡಬೇಕು. ಇಲ್ಲವಾದರೆ ಹಲವಾರು ತ್ಯಾಗ ಬಲಿದಾನಗಳಿಂದ ರೂಪುಗೊಂಡ ಸಂವಿಧಾನದ ಆಶಯಗಳು ನಾಶವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.
ಯಾವ ಮನುವಾದಿ ಮಾರ್ಗವನ್ನು ಅಂಬೇಡ್ಕರ್ ಅವರು ಹಿಡಿಯಬಾರದು ಎಂದು ಬಯಸಿದ್ದರೋ ಇಂದು ಅದೇ ಮಾರ್ಗದಲ್ಲಿ ಕೆಲವರು ಹೋಗುತ್ತಿರುವುದು ಶೋಚನೀಯವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…