ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆಗಳು ನಡೆಯದಂತೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಈ ಕುರಿತಂತೆ ಸಂವಿಧಾನವದ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಈ ಸಂಬಂಧ ಗುರುವಾರ ಪ್ರಕಟಣೆ ಹೊರಡಿಸಿರುವ ಸಚಿವರು, ಚಿಕ್ಕಮಗಳೂರು ಜಿಲ್ಲೆಯ ಗೇರಮರಡಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಸಂಬಂಧ ಇವು ಸಂವಿಧಾನದ ಸಮಾನತೆ ಮತ್ತು ಭ್ರಾತೃತ್ವದ ಆಯಗಳಿಗೆ ವಿರುದ್ಧವಾಗಿದೆ. ಶೂ ಕೊಂಡುಕೊಳ್ಳಲು ಆಗದಿರುವ ಬಡ ವರ್ಗಗಳ ಜನರಿರುವ ಸಮುದಾಯಗಳಲ್ಲೇ ಶೂ ಧರಿಸಿ ನಡೆಯುವುದು ಮೈಲಿಗೆಯಾಗಲಿದೆ ಎಂಬುದು ತಲೆ ತಗ್ಗಿಸುವಂತ ಸಂಗತಿಯಾಗಿದೆ ಎಂದಿದ್ದಾರೆ.
ಇದರೊಂದಿಗೆ ಮೈಸೂರು ಜಿಲ್ಲೆಯ ಕೆಂಚಲಗೂಡು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ನುಗ್ಗಿದರು ಎಂದು ಪ್ರತ್ಯೇಕ ದೇವಾಲಯ ನಿರ್ಮಾಣ ಮಾಡುವ ಮನಸ್ಥಿತಿ ಕಂಡು ನನ್ನ ಮನಸ್ಸು ಘಾಸಿಗೊಂಡಿದೆ
ಅಂಬೇಡ್ಕರ್ ಹೇಳಿದಂತೆ ನಮ್ಮ ಜನರು ಅದರಲ್ಲೂ ಪ್ರಮುಖವಾಗಿ ಯುವಕರು ಮೌಢ್ಯತೆಯಿಂದ ಮೊದಲು ಹೊರಬರಬೇಕಿದೆ. ಉತ್ತಮ ಶಿಕ್ಷಣ ಪಡೆದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬೆಳೆಯುವತ್ತಾ ಗಮನ ನೀಡಬೇಕು. ಇಲ್ಲವಾದರೆ ಹಲವಾರು ತ್ಯಾಗ ಬಲಿದಾನಗಳಿಂದ ರೂಪುಗೊಂಡ ಸಂವಿಧಾನದ ಆಶಯಗಳು ನಾಶವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.
ಯಾವ ಮನುವಾದಿ ಮಾರ್ಗವನ್ನು ಅಂಬೇಡ್ಕರ್ ಅವರು ಹಿಡಿಯಬಾರದು ಎಂದು ಬಯಸಿದ್ದರೋ ಇಂದು ಅದೇ ಮಾರ್ಗದಲ್ಲಿ ಕೆಲವರು ಹೋಗುತ್ತಿರುವುದು ಶೋಚನೀಯವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…