ರಾಜ್ಯ

ಯುವಕರು ಮೌಢ್ಯತೆಯಿಂದ ಮೊದಲು ಹೊರಬರಬೇಕಿದೆ: ಎಚ್‌ಸಿಎಂ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆಗಳು ನಡೆಯದಂತೆ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಈ ಕುರಿತಂತೆ ಸಂವಿಧಾನವದ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

ಈ ಸಂಬಂಧ ಗುರುವಾರ ಪ್ರಕಟಣೆ ಹೊರಡಿಸಿರುವ ಸಚಿವರು, ಚಿಕ್ಕಮಗಳೂರು ಜಿಲ್ಲೆಯ ಗೇರಮರಡಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಸಂಬಂಧ ಇವು ಸಂವಿಧಾನದ ಸಮಾನತೆ ಮತ್ತು ಭ್ರಾತೃತ್ವದ ಆಯಗಳಿಗೆ ವಿರುದ್ಧವಾಗಿದೆ. ಶೂ ಕೊಂಡುಕೊಳ್ಳಲು ಆಗದಿರುವ ಬಡ ವರ್ಗಗಳ ಜನರಿರುವ ಸಮುದಾಯಗಳಲ್ಲೇ ಶೂ ಧರಿಸಿ ನಡೆಯುವುದು ಮೈಲಿಗೆಯಾಗಲಿದೆ ಎಂಬುದು ತಲೆ ತಗ್ಗಿಸುವಂತ ಸಂಗತಿಯಾಗಿದೆ ಎಂದಿದ್ದಾರೆ.

ಇದರೊಂದಿಗೆ ಮೈಸೂರು ಜಿಲ್ಲೆಯ ಕೆಂಚಲಗೂಡು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ನುಗ್ಗಿದರು ಎಂದು ಪ್ರತ್ಯೇಕ ದೇವಾಲಯ ನಿರ್ಮಾಣ ಮಾಡುವ ಮನಸ್ಥಿತಿ ಕಂಡು ನನ್ನ ಮನಸ್ಸು ಘಾಸಿಗೊಂಡಿದೆ

ಅಂಬೇಡ್ಕರ್‌ ಹೇಳಿದಂತೆ ನಮ್ಮ ಜನರು ಅದರಲ್ಲೂ ಪ್ರಮುಖವಾಗಿ ಯುವಕರು ಮೌಢ್ಯತೆಯಿಂದ ಮೊದಲು ಹೊರಬರಬೇಕಿದೆ. ಉತ್ತಮ ಶಿಕ್ಷಣ ಪಡೆದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬೆಳೆಯುವತ್ತಾ ಗಮನ ನೀಡಬೇಕು. ಇಲ್ಲವಾದರೆ ಹಲವಾರು ತ್ಯಾಗ ಬಲಿದಾನಗಳಿಂದ ರೂಪುಗೊಂಡ ಸಂವಿಧಾನದ ಆಶಯಗಳು ನಾಶವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಯಾವ ಮನುವಾದಿ ಮಾರ್ಗವನ್ನು ಅಂಬೇಡ್ಕರ್‌ ಅವರು ಹಿಡಿಯಬಾರದು ಎಂದು ಬಯಸಿದ್ದರೋ ಇಂದು ಅದೇ ಮಾರ್ಗದಲ್ಲಿ ಕೆಲವರು ಹೋಗುತ್ತಿರುವುದು ಶೋಚನೀಯವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

42 mins ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

43 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

46 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

48 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

53 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

59 mins ago