ರಾಜ್ಯ

ಎಸ್‌ಐಟಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಯೂಟ್ಯೂಬರ್‌ ಅಭಿಷೇಕ್‌

ಮಂಗಳೂರು: ಯೂಟ್ಯೂಬರ್‌ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಅಭಿಷೇಕ್‌ನನ್ನು ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್‌ ಹಾಗೂ ವೀಕ್ಷಣೆಗಾಗಿ ವಿಡಿಯೋ ಮಾಡಿ ಅಪ್‌ಲೋಡ್‌ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಯುನೈಟೆಡ್‌ ಮೀಡಿಯಾ ಯೂಟ್ಯೂಬ್‌ ಚಾನಲ್‌ ನಡೆಸುತ್ತಿದ್ದ ಅಭಿಷೇಕ್‌, ಗಿರೀಶ್‌ ಮಟ್ಟಣ್ಣವರ್‌ ಸಂದರ್ಶನ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದರು.

6 ತಿಂಗಲ ಹಿಂದೆ ಗಿರೀಶ್‌ ಮಟ್ಟಣ್ಣವರ್‌ ಸಂಪರ್ಕಿಸಿದ್ದ ಅಭಿಷೇಕ್‌ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದರು. ಅಲ್ಲದೇ ಪ್ರಕರಣ ದಾಖಲಾಗುವ ಮುನ್ನವೇ ವಿಡಿಯೋ ಮಾಡಿದ್ದರು.

ಇದನ್ನು ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಶಾಸಕರಿಂದ ಧರ್ಮಸ್ಥಳ ಯಾತ್ರೆ

ಸುಜಾತಾ ಭಟ್‌ ಭೇಟಿ ಅನನ್ಯಾ ಭಟ್‌ ಕಾಲ್ಪನಿಕ ಕಥೆ ಬಗ್ಗೆ ಹಾಗೂ ಬಂಗ್ಲಗುಡ್ಡಕ್ಕೆ ಭೇಟಿ ನೀಡಿ ಜಯಂತ್‌ ಹಾಗೂ ಅಭಿಷೇಕ್‌ ವಿಡಿಯೋ ಮಾಡಿದ್ದರು. ಈ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ಅಭಿಷೇಕ್‌ನನ್ನು ತೀವ್ರ ವಿಚಾರಣೆ ನಡೆಸಿದ್ದು, ಲೈಕ್ಸ್‌ ಹಾಗೂ ಹೆಚ್ಚಿನ ವೀವ್ಸ್‌ಗಾಗಿ ತಾನು ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೇ ತನ್ನಿಂದ ತಪ್ಪಾಗಿದೆ ಎಂದು ವಿಚಾರಣೆ ವೇಳೆ ಕಣ್ಣೀರಿಟ್ಟಿದ್ದಾರೆ.

ಪ್ರಕರಣ ಸಂಬಂಧ ಮತ್ತಷ್ಟು ಯೂಟ್ಯೂಬರ್‌ಗಳಿಗೂ ಎಸ್‌ಐಟಿ ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago