sameer
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್ಐಆರ್ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಇದೀಗ ಬಂಧನದ ಭೀತಿ ಎದುರಿಸುತ್ತಿದ್ದ ಸಮೀರ್ಗೆ ನ್ಯಾಯಾಲಯ ರಿಲೀಫ್ ನೀಡಿದೆ.
ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್ 19ರಂದು ಸಮೀರ್ ಎಂ.ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ಹಾಕಿದ್ದರು. ಇದೀಗ ಆಗಸ್ಟ್ 21ರಂದು ಗುರುವಾರ ಕೋರ್ಟ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಸಮೀರ್ ಎ.ಐ ಬಳಸಿ ಅವಹೇಳನಕಾರಿ ವಿಡಿಯೋಗಳನ್ನು ಪ್ರಕಟಿಸಿದ್ದಾರೆ. ಪ್ರಕರಣದ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ ಎಂದು ದೂರುದಾರರು ಆರೋಪ ಮಾಡಿದ್ದರು. ಇನ್ನು ಇತ್ತೀಚೆಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಮೀರ್ನನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಸಮೀರ್ನ ವಿಡಿಯೋಗಳು ಕೋಟ್ಯಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…