ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮದ್ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಸಹ ಬಣ್ಣದ ಬಗ್ಗೆ ಹಾಗೂ ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ವೈಯಕ್ತಿಕವಾಗಿ ನಿಂದನೆ ಮಾಡಬಾರದು ಎಂದರು.
ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ವೇಳೆ ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣಿಸುತ್ತದೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್ ಆಗಿದೆ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ಯಾಕೆ ಅರಗ ಜ್ಞಾನೇಂದ್ರ ವಿರುದ್ಧ ಬಿಜೆಪಿ-ಜೆಡಿಎಸ್ ಅವರು ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆ ಇದು ರಾಷ್ಟ್ರೀಯ ಸುದ್ದಿ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…