ರಾಜ್ಯ

ಹಣ ಪಡೆದು ಮನೆ ಕೊಟ್ಟರೆ ಒಳ್ಳೆಯದಾಗುತ್ತಾ? ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರಶ್ನೆ

ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ ನೀಡಿದ್ದು, ಬಿ.ಆರ್.ಪಾಟೀಲ್‌ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಣ ಪಡೆದು ಮನೆ ಕೊಟ್ಟರೆ ನನ್ನ ಕುಟುಂಬಕ್ಕೆ ಒಳ್ಳೆಯದಾಗುತ್ತಾ? ಬಡವರ ಬಳಿ ಹಣ ತೆಗೆದುಕೊಂಡರೆ ಹುಳ ಬಿದ್ದು ಸಾಯ್ತಾರೆ. ಬಿ.ಆರ್.ಪಾಟೀಲ್‌ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 14 ಲಕ್ಷ ಮನೆ ಹಂಚಿಕೆ ಮಾಡಲಾಗಿತ್ತು. ನಂತರ ಬಂದ ಸರ್ಕಾರ 5.8 ಲಕ್ಷ ಮನೆಗಳನ್ನು ನೀಡಿತ್ತು. ಮೂರು ಹಂತದಲ್ಲಿ ನಾವು ಮನೆಗಳನ್ನು ಹಂಚಿಕೆ ಮಾಡುತ್ತೇವೆ. ಈಗ ನಾವು ಯಾವುದೇ ಹೊಸ ಟಾರ್ಗೆಟ್‌ ನೀಡಿಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿ.ಆರ್.ಪಾಟೀಲ್‌ ಅವರು ಸಚಿವರು ಹಣ ಪಡೆದಿದ್ದಾರೆ ಎಂದಿದ್ದಾರಾ.? ಬಿ.ಆರ್.ಪಾಟೀಲ್‌ ಹೇಳಿಕೆ ಬಗ್ಗೆ ತನಿಖೆ ಆಗಲಿ. ಬೇಕಾದರೆ ಸಿಬಿಐ ತನಿಖೆಗೆ ಕೊಡಲಿ ಎಂದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

1 min ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

13 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

15 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

18 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

22 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago