Mysore
31
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್‌ ಬಾಂಬ್‌ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪುನರುಚ್ಛರಿಸಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ಣಾಮ ಮಾಡಬಹುದು ಎಂದರು.

ಆಪರೇಷನ್‌ ಸಿಂಧೂರ ಯಶಸ್ವಿಯಾಗಲಿ ಎಂದು ನಾವೆಲ್ಲಾ ನಿನ್ನೆ ಮಸೀದಿಗಳಲ್ಲಿ ಪಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್‌ ಬಾಂಬ್‌ ಇಟ್ಟುಕೊಂಡು ಪಾಕ್‌ ಹೋಗಲು ಸಿದ್ಧನಿದ್ದೇನೆ ಎಂದು ಪುನರುಚ್ಛರಿಸಿದರು.

ಇದನ್ನೂ ಓದಿ:- ಆಪರೇಷನ್‌ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್‌

ಇನ್ನು ಪಾಕಿಸ್ತಾನ ಒಂದು ಠುಸ್‌ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನನ್ನೂ ಮಾಡಲು ಸಹ ಸಿದ್ಧ. ಪಾಕ್‌ನಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದರು.

Tags:
error: Content is protected !!