ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಪುನರುಚ್ಛರಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ಣಾಮ ಮಾಡಬಹುದು ಎಂದರು.
ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ನಾವೆಲ್ಲಾ ನಿನ್ನೆ ಮಸೀದಿಗಳಲ್ಲಿ ಪಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಇಟ್ಟುಕೊಂಡು ಪಾಕ್ ಹೋಗಲು ಸಿದ್ಧನಿದ್ದೇನೆ ಎಂದು ಪುನರುಚ್ಛರಿಸಿದರು.
ಇದನ್ನೂ ಓದಿ:- ಆಪರೇಷನ್ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
ಇನ್ನು ಪಾಕಿಸ್ತಾನ ಒಂದು ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನನ್ನೂ ಮಾಡಲು ಸಹ ಸಿದ್ಧ. ಪಾಕ್ನಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…