ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಪುನರುಚ್ಛರಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ಣಾಮ ಮಾಡಬಹುದು ಎಂದರು.
ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ನಾವೆಲ್ಲಾ ನಿನ್ನೆ ಮಸೀದಿಗಳಲ್ಲಿ ಪಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಇಟ್ಟುಕೊಂಡು ಪಾಕ್ ಹೋಗಲು ಸಿದ್ಧನಿದ್ದೇನೆ ಎಂದು ಪುನರುಚ್ಛರಿಸಿದರು.
ಇದನ್ನೂ ಓದಿ:- ಆಪರೇಷನ್ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
ಇನ್ನು ಪಾಕಿಸ್ತಾನ ಒಂದು ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನನ್ನೂ ಮಾಡಲು ಸಹ ಸಿದ್ಧ. ಪಾಕ್ನಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…