ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಪುನರುಚ್ಛರಿಸಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯರು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ಣಾಮ ಮಾಡಬಹುದು ಎಂದರು.
ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ನಾವೆಲ್ಲಾ ನಿನ್ನೆ ಮಸೀದಿಗಳಲ್ಲಿ ಪಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್ ಬಾಂಬ್ ಇಟ್ಟುಕೊಂಡು ಪಾಕ್ ಹೋಗಲು ಸಿದ್ಧನಿದ್ದೇನೆ ಎಂದು ಪುನರುಚ್ಛರಿಸಿದರು.
ಇದನ್ನೂ ಓದಿ:- ಆಪರೇಷನ್ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
ಇನ್ನು ಪಾಕಿಸ್ತಾನ ಒಂದು ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನನ್ನೂ ಮಾಡಲು ಸಹ ಸಿದ್ಧ. ಪಾಕ್ನಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…