ರಾಜ್ಯ

ನಾನೊಬ್ಬ ಭಾರತೀಯ, ಕನ್ನಡಿಗ ಆನಂತರ ನಾನೊಬ್ಬ ಮುಸಲ್ಮಾನ: ಜಮೀರ್‌ ಅಹಮದ್‌ ಖಾನ್‌

ಶಿವಮೊಗ್ಗ: ನಾನೊಬ್ಬ ನಂಬಿಗಸ್ಥ ಮುಸಲ್ಮಾನ ಇರಬಹುದು, ಆದರೆ ಅದಕ್ಕೂ ಮೊದಲು ನಾನೊಬ್ಬ ಹೆಮ್ಮೆಯ ಭಾರತೀಯ ಮತ್ತು ನಾನು ಕನ್ನಡಿಗನಾಗಿದ್ದೇನೆ. ಆ ನಂತರ ನಾನೊಬ್ಬ ಮುಸಲ್ಮಾನ ಎಂದು ಹೇಳಿಕೊಳ್ಳಲು ನನಗೆ ಅಭಿಮಾನವಾಗುತ್ತದೆ ಎಂದು ಸಚಿವ ಬಿ.ಜೆಡ್. ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ. 25) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಎಲ್ಲಾ ಸಮಾಜದ ಜನರು ನಂಬಿರುತ್ತಾರೆ. ನಾವು ಜಾತಿ ಮತ್ತ ಧರ್ಮದ ರಾಜಕಾರಣ ಮಾಡಲು ಹೋದರೆ, ದೇವರು ಸಹ ಮೆಚ್ಚಲಾರ ನಾಡಿನ ಸಮಸ್ತ ಜನ ಪ್ರತಿನಿಧಿಗಳಾಗಿರುವ ನಾವು ಜಾತಿ ಹಾಗೂ ಧರ್ಮ ರಾಜಕಾರಣ ಮಾಡಿದರೆ ನಮ್ಮ ಮಕ್ಕಳಿಗೆ ಖಂಡಿತವಾಗಿಯೂ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.

ರಾಜಕೀಯ ಕ್ಷೇತ್ರಕ್ಕೆ ಬಂದ ಮೇಲೆ ದಯವಿಟ್ಟು ಯಾರೂ ಜಾತಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಮಾಡಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ರಾಜಕೀಯ ನಾಯಕರು ಜಾತಿ ಮತ್ತು ಧರ್ಮವನ್ನು ಅವರ ಮನೆಯಲ್ಲೇ ಮಾಡಬೇಕೇ ಹೊರತು, ಸಮಾಜದಲ್ಲಿ ಅಲ್ಲ. ಅವರು ಸಮಾಜಕ್ಕೆ ಆದರ್ಶವಾಗಿರಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಹೀಗಾಗಿ ರಾಜಕಾರಣಿಗಳು ಜಾತಿ ಮತ್ತು ಧರ್ಮವನ್ನು ರಾಜಕಾರಣಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಪುಂಡರ ಗುಂಪು ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆದ ಸೌಹಾರ್ದವನ್ನು ಹಾಳುಮಾಡುವ ಹುನ್ನಾರ ನಡೆಸುತ್ತಿವೆ ಎಂದು ಪರೋಕ್ಷವಾಗಿ ಎಂಇಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

3 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

6 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago