ರಾಜ್ಯ

ನಾನೊಬ್ಬ ಭಾರತೀಯ, ಕನ್ನಡಿಗ ಆನಂತರ ನಾನೊಬ್ಬ ಮುಸಲ್ಮಾನ: ಜಮೀರ್‌ ಅಹಮದ್‌ ಖಾನ್‌

ಶಿವಮೊಗ್ಗ: ನಾನೊಬ್ಬ ನಂಬಿಗಸ್ಥ ಮುಸಲ್ಮಾನ ಇರಬಹುದು, ಆದರೆ ಅದಕ್ಕೂ ಮೊದಲು ನಾನೊಬ್ಬ ಹೆಮ್ಮೆಯ ಭಾರತೀಯ ಮತ್ತು ನಾನು ಕನ್ನಡಿಗನಾಗಿದ್ದೇನೆ. ಆ ನಂತರ ನಾನೊಬ್ಬ ಮುಸಲ್ಮಾನ ಎಂದು ಹೇಳಿಕೊಳ್ಳಲು ನನಗೆ ಅಭಿಮಾನವಾಗುತ್ತದೆ ಎಂದು ಸಚಿವ ಬಿ.ಜೆಡ್. ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ. 25) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಎಲ್ಲಾ ಸಮಾಜದ ಜನರು ನಂಬಿರುತ್ತಾರೆ. ನಾವು ಜಾತಿ ಮತ್ತ ಧರ್ಮದ ರಾಜಕಾರಣ ಮಾಡಲು ಹೋದರೆ, ದೇವರು ಸಹ ಮೆಚ್ಚಲಾರ ನಾಡಿನ ಸಮಸ್ತ ಜನ ಪ್ರತಿನಿಧಿಗಳಾಗಿರುವ ನಾವು ಜಾತಿ ಹಾಗೂ ಧರ್ಮ ರಾಜಕಾರಣ ಮಾಡಿದರೆ ನಮ್ಮ ಮಕ್ಕಳಿಗೆ ಖಂಡಿತವಾಗಿಯೂ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.

ರಾಜಕೀಯ ಕ್ಷೇತ್ರಕ್ಕೆ ಬಂದ ಮೇಲೆ ದಯವಿಟ್ಟು ಯಾರೂ ಜಾತಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಮಾಡಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ರಾಜಕೀಯ ನಾಯಕರು ಜಾತಿ ಮತ್ತು ಧರ್ಮವನ್ನು ಅವರ ಮನೆಯಲ್ಲೇ ಮಾಡಬೇಕೇ ಹೊರತು, ಸಮಾಜದಲ್ಲಿ ಅಲ್ಲ. ಅವರು ಸಮಾಜಕ್ಕೆ ಆದರ್ಶವಾಗಿರಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಹೀಗಾಗಿ ರಾಜಕಾರಣಿಗಳು ಜಾತಿ ಮತ್ತು ಧರ್ಮವನ್ನು ರಾಜಕಾರಣಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಪುಂಡರ ಗುಂಪು ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆದ ಸೌಹಾರ್ದವನ್ನು ಹಾಳುಮಾಡುವ ಹುನ್ನಾರ ನಡೆಸುತ್ತಿವೆ ಎಂದು ಪರೋಕ್ಷವಾಗಿ ಎಂಇಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

1 hour ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

6 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

6 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

13 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

13 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

13 hours ago