ರಾಜ್ಯ

ನಾನೊಬ್ಬ ಭಾರತೀಯ, ಕನ್ನಡಿಗ ಆನಂತರ ನಾನೊಬ್ಬ ಮುಸಲ್ಮಾನ: ಜಮೀರ್‌ ಅಹಮದ್‌ ಖಾನ್‌

ಶಿವಮೊಗ್ಗ: ನಾನೊಬ್ಬ ನಂಬಿಗಸ್ಥ ಮುಸಲ್ಮಾನ ಇರಬಹುದು, ಆದರೆ ಅದಕ್ಕೂ ಮೊದಲು ನಾನೊಬ್ಬ ಹೆಮ್ಮೆಯ ಭಾರತೀಯ ಮತ್ತು ನಾನು ಕನ್ನಡಿಗನಾಗಿದ್ದೇನೆ. ಆ ನಂತರ ನಾನೊಬ್ಬ ಮುಸಲ್ಮಾನ ಎಂದು ಹೇಳಿಕೊಳ್ಳಲು ನನಗೆ ಅಭಿಮಾನವಾಗುತ್ತದೆ ಎಂದು ಸಚಿವ ಬಿ.ಜೆಡ್. ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ. 25) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಎಲ್ಲಾ ಸಮಾಜದ ಜನರು ನಂಬಿರುತ್ತಾರೆ. ನಾವು ಜಾತಿ ಮತ್ತ ಧರ್ಮದ ರಾಜಕಾರಣ ಮಾಡಲು ಹೋದರೆ, ದೇವರು ಸಹ ಮೆಚ್ಚಲಾರ ನಾಡಿನ ಸಮಸ್ತ ಜನ ಪ್ರತಿನಿಧಿಗಳಾಗಿರುವ ನಾವು ಜಾತಿ ಹಾಗೂ ಧರ್ಮ ರಾಜಕಾರಣ ಮಾಡಿದರೆ ನಮ್ಮ ಮಕ್ಕಳಿಗೆ ಖಂಡಿತವಾಗಿಯೂ ಒಳ್ಳೆಯದಾಗುವುದಿಲ್ಲ ಎಂದಿದ್ದಾರೆ.

ರಾಜಕೀಯ ಕ್ಷೇತ್ರಕ್ಕೆ ಬಂದ ಮೇಲೆ ದಯವಿಟ್ಟು ಯಾರೂ ಜಾತಿ ರಾಜಕಾರಣ ಮತ್ತು ಧರ್ಮ ರಾಜಕಾರಣ ಮಾಡಬಾರದು ಎಂಬುದು ನನ್ನ ಅಭಿಪ್ರಾಯವಾಗಿದೆ. ರಾಜಕೀಯ ನಾಯಕರು ಜಾತಿ ಮತ್ತು ಧರ್ಮವನ್ನು ಅವರ ಮನೆಯಲ್ಲೇ ಮಾಡಬೇಕೇ ಹೊರತು, ಸಮಾಜದಲ್ಲಿ ಅಲ್ಲ. ಅವರು ಸಮಾಜಕ್ಕೆ ಆದರ್ಶವಾಗಿರಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಹೀಗಾಗಿ ರಾಜಕಾರಣಿಗಳು ಜಾತಿ ಮತ್ತು ಧರ್ಮವನ್ನು ರಾಜಕಾರಣಕ್ಕೆ ಎಳೆದು ತರುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬೆಳಗಾವಿಯ ಕಂಡಕ್ಟರ್‌ ಮೇಲಿನ ಹಲ್ಲೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಪುಂಡರ ಗುಂಪು ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆದ ಸೌಹಾರ್ದವನ್ನು ಹಾಳುಮಾಡುವ ಹುನ್ನಾರ ನಡೆಸುತ್ತಿವೆ ಎಂದು ಪರೋಕ್ಷವಾಗಿ ಎಂಇಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

9 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

10 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

10 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

11 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

11 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

12 hours ago