ರಾಜ್ಯ

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹ್ಮದ್‌

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿಂದು (ಜೂನ್‌.17) ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರೆಶ್ನೆ ಮಾಡಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ರೂ. ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಕಡಿಮೆ ಆಗಲಿಲ್ಲ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅಡುಗೆ ಅನಿಲ ಬೆಲೆ 419 ರೂ. ಇದ್ದದ್ದು 903 ರೂ.ಮಾಡಿದ್ದು ಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್ ಲೀಟರ್ ಗೆ 102 ರೂ., ಡೀಸೆಲ್ 88.41 ರೂ. ಆಗಿದೆ. ನೆರೆಯ ತಮಿಳು ನಾಡು, ಆಂಧ್ರ, ಮಹಾರಾಷ್ಟ್ರ ಕ್ಕೆ ಹೋಲಿಸಿದರೆ 5 ರಿಂದ 7 ರೂ. ವರೆಗೆ ಕಡಿಮೆ. ಕೇರಳದಲ್ಲಿ ಪೆಟ್ರೋಲ್ 106.66, ಡೀಸೆಲ್ 95.60,, ಆಂಧ್ರ ದಲ್ಲಿ ಪೆಟ್ರೋಲ್ 109.44, ಡಿಸೇಲ್ 97.28, ಮಹಾರಾಷ್ಟ್ರ ದಲ್ಲಿ ಪೆಟ್ರೋಲ್ 104.46, ಡೀಸೆಲ್ 90.45ರೂ. ಇದೆ. ಇದಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲೇ ಅತಿ ಕಡಿಮೆ. ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು.ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಖಾನ್ ವ್ಯಂಗ್ಯವಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago