ಕುಮಾರಸ್ವಾಮಿ ಎಂದರೆ ಯೂಟರ್ನ್: ಜಮೀರ್
ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್. ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಅಂತೆಲ್ಲಾ ಲಘುವಾಗಿ ಮಾತನಾಡಿದ್ದಾರೆ. ಅಂಥವರ ಬಳಿ ಯಾಕೆ ಓಟು ಕೇಳಬೇಕು. ನಿನ್ನೆಯು ಕುಮಾರಸ್ವಾಮಿ ಅದೇ ಹೇಳಿದ್ದಾರೆ. ಹೌದು ಸ್ವಾಮಿ ಮುಸ್ಲಿಮರು ಬಡವರು ಅಂಥವರ ಬಳಿ ನೀವು ಓಟು ಕೇಳಬಾರದು ಎಂದು ಕಿಡಿಕಾರಿದರು.
ನಾನು ದೇವೇಗೌಡರ ಕುಟುಂಬ ಖರೀದಿ ಮಾಡುತ್ತೇನೆ ಎಂದು ಹೇಳಿಲ್ಲ. ಕುಮಾರಸ್ವಾಮಿ ಮುಸ್ಮಿಮರು ನನಗೆ ಬೇಕಾಗಿಲ್ಲ ಅಂತಾ ಹೇಳಿದ್ರು. ಈ ಹಿನ್ನೆಲೆ ಮುಸ್ಮಿಂ ಓಟು ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡ್ತಿದ್ದೀರಿ ಅಲ್ವ? ಇದು ಎಷ್ಟು ಸರಿ ಅಂತ ನಾನು ಕೇಳಿದ್ದು ಎಂದರು.
ನಾನು ಮಠದ ಹುಡುಗ
ನಾನು ಆದಿಚುಂಚನಗಿರಿ ಮಠದಲ್ಲಿ ಬೆಳದಿದ್ದು. ನಾನು ಮಠದ ಹುಡುಗ. ಒಕ್ಕಲಿಗರ ಬಗ್ಗೆ ಗೌರವವಿದೆ. ಸ್ವಾಮೀಜಿ ಮಡಿಲಲ್ಲಿ ಬೆಳೆದವ ನಾನು. ಬೇಕಿದ್ದರೆ ಕುಮಾರಸ್ವಾಮಿಯನ್ನೇ ಕೇಳಿ. ನಾನು ಕುಮಾರಸ್ವಾಮಿ ಬಗ್ಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಅಷ್ಟೇ ಎಂದು ಪುನರುಚ್ಚರಿಸಿದರು.
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…