ಕುಮಾರಸ್ವಾಮಿ ಎಂದರೆ ಯೂಟರ್ನ್: ಜಮೀರ್
ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್. ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವವರು ಅಂತೆಲ್ಲಾ ಲಘುವಾಗಿ ಮಾತನಾಡಿದ್ದಾರೆ. ಅಂಥವರ ಬಳಿ ಯಾಕೆ ಓಟು ಕೇಳಬೇಕು. ನಿನ್ನೆಯು ಕುಮಾರಸ್ವಾಮಿ ಅದೇ ಹೇಳಿದ್ದಾರೆ. ಹೌದು ಸ್ವಾಮಿ ಮುಸ್ಲಿಮರು ಬಡವರು ಅಂಥವರ ಬಳಿ ನೀವು ಓಟು ಕೇಳಬಾರದು ಎಂದು ಕಿಡಿಕಾರಿದರು.
ನಾನು ದೇವೇಗೌಡರ ಕುಟುಂಬ ಖರೀದಿ ಮಾಡುತ್ತೇನೆ ಎಂದು ಹೇಳಿಲ್ಲ. ಕುಮಾರಸ್ವಾಮಿ ಮುಸ್ಮಿಮರು ನನಗೆ ಬೇಕಾಗಿಲ್ಲ ಅಂತಾ ಹೇಳಿದ್ರು. ಈ ಹಿನ್ನೆಲೆ ಮುಸ್ಮಿಂ ಓಟು ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡ್ತಿದ್ದೀರಿ ಅಲ್ವ? ಇದು ಎಷ್ಟು ಸರಿ ಅಂತ ನಾನು ಕೇಳಿದ್ದು ಎಂದರು.
ನಾನು ಮಠದ ಹುಡುಗ
ನಾನು ಆದಿಚುಂಚನಗಿರಿ ಮಠದಲ್ಲಿ ಬೆಳದಿದ್ದು. ನಾನು ಮಠದ ಹುಡುಗ. ಒಕ್ಕಲಿಗರ ಬಗ್ಗೆ ಗೌರವವಿದೆ. ಸ್ವಾಮೀಜಿ ಮಡಿಲಲ್ಲಿ ಬೆಳೆದವ ನಾನು. ಬೇಕಿದ್ದರೆ ಕುಮಾರಸ್ವಾಮಿಯನ್ನೇ ಕೇಳಿ. ನಾನು ಕುಮಾರಸ್ವಾಮಿ ಬಗ್ಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಅಷ್ಟೇ ಎಂದು ಪುನರುಚ್ಚರಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…