ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಆತಂಕ ; ಎಚ್ಚರವಹಿಸಲು ವೈದ್ಯರ ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್‌ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ ಜ್ವರ, ಕೆಮ್ಮು, ಗಂಟಲು ನೋವು, ಶೀತ, ನೆಗಡಿ, ವಾಂತಿ ಪ್ರಕರಣಗಳು ಹೆಚ್ಚಾಗಿದೆ.

ಬದಲಾಗುತ್ತಿರುವ ವಾತವರಣದಿಂದಾಗಿ ಡೆಂಗ್ಯೂ, ಟೈಫಾಯ್ಡ್‌, ವೈರಲ್‌ ಜ್ವರ ಕೂಡ ಕಾಣಿಸಿಕೊಳ್ಳುತ್ತಿದ್ದು, ಇದರ ಜೊತೆಗೆ ಝೀಕಾ ಹಾಗೂ ಮೆದುಳು ತಿನ್ನುವ ಅಮೀಬಾ ವೈರಸ್‌ ಆತಂಕವು ಕೂಡ ಹೆಚ್ಚಾಗಿದ್ದು, ಸರ್ಕಾರಿ ಆಸ್ಪತ್ರೆಗಳು ಫುಲ್ ಹೈ ಅಲರ್ಟ್‌ ಆಗಿವೆ.

ಈಗಾಗಲೇ ಡೆಂಗ್ಯೂ ಹಾಗೂ ಝೀಕಾ ವೈರಸ್‌ ಎರಡು ರೋಗ ಲಕ್ಷಣಗಳಲ್ಲೂ ಸಾಮತ್ಯೆ ಇದ್ದು ವೈದ್ಯರು ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಮತ್ತೀತರ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯವಹಿಸದೆ ಎಚ್ಚರಿವಹಿಸಬೇಕು. ‌

ಬಹುತೇಕ ಸೋಂಕು ಪೀಡಿತರಿಗೆ ರೋಗ ಲಕ್ಷಣಗಳು ಕಂಡು ಬರುವುದಿಲ್ಲ. ಇನ್ನ ಕೆಲವರಿಗೆ ರೋಗ ಲಕ್ಷಣಗಳು ಸೌಮ್ಯ ಮತ್ತು ಸಾಧಾರಣ ಸ್ವರೂಪದಲ್ಲಿದ್ದು, ೨ ರಿಂದ ೭ ದಿನಗಳ ವರೆಗೆ ಕಂಡು ಬರ್ತಿದೆ. ಈಗಾಗಿಯೇ ವೈದ್ಯರು ಜ್ವರ ತೀವ್ರ ಸ್ವರೂಪಕ್ಕೆ ಹೋಗದಂತೆ ತಡೆಯಲು ಎಚ್ಚರಿಕೆ ನೀಡಿದ್ದಾರೆ.

ಈ ಸಮಯದಲ್ಲಿ ಜನರು ಮನೆ ಸುತ್ತ ಸ್ವಚ್ಛತೆಯನ್ನು ಕಾಪಾಡುವುದು ಈ ಹೊತ್ತಿನಲ್ಲಿ ಅಗತ್ಯ. ಅಲ್ಲದೆ ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಅಗತ್ಯ ಎಂಬ ಸಲಹೆ ಸಹ ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

7 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

9 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

11 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

14 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

19 mins ago