ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ ಜ್ವರ, ಕೆಮ್ಮು, ಗಂಟಲು ನೋವು, ಶೀತ, ನೆಗಡಿ, ವಾಂತಿ ಪ್ರಕರಣಗಳು ಹೆಚ್ಚಾಗಿದೆ.
ಬದಲಾಗುತ್ತಿರುವ ವಾತವರಣದಿಂದಾಗಿ ಡೆಂಗ್ಯೂ, ಟೈಫಾಯ್ಡ್, ವೈರಲ್ ಜ್ವರ ಕೂಡ ಕಾಣಿಸಿಕೊಳ್ಳುತ್ತಿದ್ದು, ಇದರ ಜೊತೆಗೆ ಝೀಕಾ ಹಾಗೂ ಮೆದುಳು ತಿನ್ನುವ ಅಮೀಬಾ ವೈರಸ್ ಆತಂಕವು ಕೂಡ ಹೆಚ್ಚಾಗಿದ್ದು, ಸರ್ಕಾರಿ ಆಸ್ಪತ್ರೆಗಳು ಫುಲ್ ಹೈ ಅಲರ್ಟ್ ಆಗಿವೆ.
ಈಗಾಗಲೇ ಡೆಂಗ್ಯೂ ಹಾಗೂ ಝೀಕಾ ವೈರಸ್ ಎರಡು ರೋಗ ಲಕ್ಷಣಗಳಲ್ಲೂ ಸಾಮತ್ಯೆ ಇದ್ದು ವೈದ್ಯರು ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಮತ್ತೀತರ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯವಹಿಸದೆ ಎಚ್ಚರಿವಹಿಸಬೇಕು.
ಬಹುತೇಕ ಸೋಂಕು ಪೀಡಿತರಿಗೆ ರೋಗ ಲಕ್ಷಣಗಳು ಕಂಡು ಬರುವುದಿಲ್ಲ. ಇನ್ನ ಕೆಲವರಿಗೆ ರೋಗ ಲಕ್ಷಣಗಳು ಸೌಮ್ಯ ಮತ್ತು ಸಾಧಾರಣ ಸ್ವರೂಪದಲ್ಲಿದ್ದು, ೨ ರಿಂದ ೭ ದಿನಗಳ ವರೆಗೆ ಕಂಡು ಬರ್ತಿದೆ. ಈಗಾಗಿಯೇ ವೈದ್ಯರು ಜ್ವರ ತೀವ್ರ ಸ್ವರೂಪಕ್ಕೆ ಹೋಗದಂತೆ ತಡೆಯಲು ಎಚ್ಚರಿಕೆ ನೀಡಿದ್ದಾರೆ.
ಈ ಸಮಯದಲ್ಲಿ ಜನರು ಮನೆ ಸುತ್ತ ಸ್ವಚ್ಛತೆಯನ್ನು ಕಾಪಾಡುವುದು ಈ ಹೊತ್ತಿನಲ್ಲಿ ಅಗತ್ಯ. ಅಲ್ಲದೆ ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಅಗತ್ಯ ಎಂಬ ಸಲಹೆ ಸಹ ನೀಡಿದ್ದಾರೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…
ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…
ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…