ಟೆಕ್‌

ಸ್ಪಾಮ್‌ ಕರೆಗಳ ಕಾಟವೇ? TRAI DND ಆ್ಯಪ್‌ನಲ್ಲಿ ವರದಿ ಮಾಡಲು ಟ್ರಾಯ್ ಸೂಚನೆ

ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್‌ ಕಾಲ್ಸ್‌) ನಂಬರ್‌ಗಳನ್ನು ಬ್ಲಾಕ್‌ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್‌ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ.

ಬಳಕೆದಾರರ ದೂರಿನ ಆಧಾರದಲ್ಲಿ ಅನಪೇಕ್ಷಿತ ಕರೆ ಮತ್ತು ವಂಚನೆ ಸಂದೇಶ ಕಳುಹಿಸಿದ 21 ಲಕ್ಷಕ್ಕೂ ಹೆಚ್ಚು ಮೊಬೈಲ್‌ ಸಂಖ್ಯೆಗಳ ಸಂಪರ್ಕವನ್ನು ಕಡಿತಗೊಳಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಟ್ರಾಯ್ ಹೇಳಿದೆ.

ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಪ್ರಾಧಿಕಾರ, ಅನಪೇಕ್ಷಿತ ಕರೆಯ ಫೋನ್‌ ನಂಬರ್‌ಗಳನ್ನು ಟ್ರಾಯ್‌ ಡಿಎನ್‌ಡಿ ಆ್ಯಪ್‌ನಲ್ಲಿ ಫೋನ್‌ ಮಾಡುವ ಅಥವಾ ಎಸ್‌ಎಂಎಸ್‌ ಮೂಲಕ ವರದಿ ಮಾಡುವಂತೆ ಸೂಚಿಸಿದೆ.

ಇದನ್ನೂ ಓದಿ:-ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬಳಕೆದಾರರು ಅನಪೇಕ್ಷಿತ ಕರೆಗಳ ನಂಬರ್‌ಗಳನ್ನು ಆ್ಯಪ್‌ನಲ್ಲಿ ನಮೂದಿಸಿದಾಗ ನಮಗೆ ಆ ಸಂಖ್ಯೆ ಇರುವ ಜಾಗವನ್ನು ಪತ್ತೆ ಮಾಡಲು, ಪರಿಶೀಲಿಸಲು ಮತ್ತು ಶಾಶ್ವತವಾಗಿ ಸಂಪರ್ಕ ಕಡಿತಗೊಳಿಸಲು ನೆರವಾಗುತ್ತದೆ. ಫೋನ್‌ ನಂಬರ್‌ಗಳನ್ನು ನಿಮ್ಮ ಮೊಬೈಲ್‌ನಲ್ಲಿ ಮಾತ್ರ ಬ್ಲಾಕ್‌ ಮಾಡಿದಾಗ ನಿಮ್ಮ ಖಾಸಗಿ ಸಾಧನದಲ್ಲಿ ಮಾತ್ರ ಮರೆಯಾಗುತ್ತದೆ. ಇದು ವಂಚಕರು ಹೊಸ ಸಂಖ್ಯೆಗಳನ್ನು ಬಳಸಿಕೊಂಡು ಇತರರನ್ನು ಸಂಪರ್ಕಿಸುವುದನ್ನು ತಡೆಯುವುದಿಲ್ಲ ಎಂದು ಟ್ರಾಯ್‌ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

20 mins ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

34 mins ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

52 mins ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

1 hour ago

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

1 hour ago

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆಗ್ರಹ

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…

1 hour ago