ಟೆಕ್‌

ಸ್ಪಾಮ್‌ ಕರೆಗಳ ಕಾಟವೇ? TRAI DND ಆ್ಯಪ್‌ನಲ್ಲಿ ವರದಿ ಮಾಡಲು ಟ್ರಾಯ್ ಸೂಚನೆ

ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್‌ ಕಾಲ್ಸ್‌) ನಂಬರ್‌ಗಳನ್ನು ಬ್ಲಾಕ್‌ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್‌ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ.

ಬಳಕೆದಾರರ ದೂರಿನ ಆಧಾರದಲ್ಲಿ ಅನಪೇಕ್ಷಿತ ಕರೆ ಮತ್ತು ವಂಚನೆ ಸಂದೇಶ ಕಳುಹಿಸಿದ 21 ಲಕ್ಷಕ್ಕೂ ಹೆಚ್ಚು ಮೊಬೈಲ್‌ ಸಂಖ್ಯೆಗಳ ಸಂಪರ್ಕವನ್ನು ಕಡಿತಗೊಳಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಟ್ರಾಯ್ ಹೇಳಿದೆ.

ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಪ್ರಾಧಿಕಾರ, ಅನಪೇಕ್ಷಿತ ಕರೆಯ ಫೋನ್‌ ನಂಬರ್‌ಗಳನ್ನು ಟ್ರಾಯ್‌ ಡಿಎನ್‌ಡಿ ಆ್ಯಪ್‌ನಲ್ಲಿ ಫೋನ್‌ ಮಾಡುವ ಅಥವಾ ಎಸ್‌ಎಂಎಸ್‌ ಮೂಲಕ ವರದಿ ಮಾಡುವಂತೆ ಸೂಚಿಸಿದೆ.

ಇದನ್ನೂ ಓದಿ:-ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬಳಕೆದಾರರು ಅನಪೇಕ್ಷಿತ ಕರೆಗಳ ನಂಬರ್‌ಗಳನ್ನು ಆ್ಯಪ್‌ನಲ್ಲಿ ನಮೂದಿಸಿದಾಗ ನಮಗೆ ಆ ಸಂಖ್ಯೆ ಇರುವ ಜಾಗವನ್ನು ಪತ್ತೆ ಮಾಡಲು, ಪರಿಶೀಲಿಸಲು ಮತ್ತು ಶಾಶ್ವತವಾಗಿ ಸಂಪರ್ಕ ಕಡಿತಗೊಳಿಸಲು ನೆರವಾಗುತ್ತದೆ. ಫೋನ್‌ ನಂಬರ್‌ಗಳನ್ನು ನಿಮ್ಮ ಮೊಬೈಲ್‌ನಲ್ಲಿ ಮಾತ್ರ ಬ್ಲಾಕ್‌ ಮಾಡಿದಾಗ ನಿಮ್ಮ ಖಾಸಗಿ ಸಾಧನದಲ್ಲಿ ಮಾತ್ರ ಮರೆಯಾಗುತ್ತದೆ. ಇದು ವಂಚಕರು ಹೊಸ ಸಂಖ್ಯೆಗಳನ್ನು ಬಳಸಿಕೊಂಡು ಇತರರನ್ನು ಸಂಪರ್ಕಿಸುವುದನ್ನು ತಡೆಯುವುದಿಲ್ಲ ಎಂದು ಟ್ರಾಯ್‌ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

11 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

13 mins ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

15 mins ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

3 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago