ಟೆಕ್‌

ಸ್ಪಾಮ್‌ ಕರೆಗಳ ಕಾಟವೇ? TRAI DND ಆ್ಯಪ್‌ನಲ್ಲಿ ವರದಿ ಮಾಡಲು ಟ್ರಾಯ್ ಸೂಚನೆ

ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್‌ ಕಾಲ್ಸ್‌) ನಂಬರ್‌ಗಳನ್ನು ಬ್ಲಾಕ್‌ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್‌ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ.

ಬಳಕೆದಾರರ ದೂರಿನ ಆಧಾರದಲ್ಲಿ ಅನಪೇಕ್ಷಿತ ಕರೆ ಮತ್ತು ವಂಚನೆ ಸಂದೇಶ ಕಳುಹಿಸಿದ 21 ಲಕ್ಷಕ್ಕೂ ಹೆಚ್ಚು ಮೊಬೈಲ್‌ ಸಂಖ್ಯೆಗಳ ಸಂಪರ್ಕವನ್ನು ಕಡಿತಗೊಳಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಟ್ರಾಯ್ ಹೇಳಿದೆ.

ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಪ್ರಾಧಿಕಾರ, ಅನಪೇಕ್ಷಿತ ಕರೆಯ ಫೋನ್‌ ನಂಬರ್‌ಗಳನ್ನು ಟ್ರಾಯ್‌ ಡಿಎನ್‌ಡಿ ಆ್ಯಪ್‌ನಲ್ಲಿ ಫೋನ್‌ ಮಾಡುವ ಅಥವಾ ಎಸ್‌ಎಂಎಸ್‌ ಮೂಲಕ ವರದಿ ಮಾಡುವಂತೆ ಸೂಚಿಸಿದೆ.

ಇದನ್ನೂ ಓದಿ:-ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬಳಕೆದಾರರು ಅನಪೇಕ್ಷಿತ ಕರೆಗಳ ನಂಬರ್‌ಗಳನ್ನು ಆ್ಯಪ್‌ನಲ್ಲಿ ನಮೂದಿಸಿದಾಗ ನಮಗೆ ಆ ಸಂಖ್ಯೆ ಇರುವ ಜಾಗವನ್ನು ಪತ್ತೆ ಮಾಡಲು, ಪರಿಶೀಲಿಸಲು ಮತ್ತು ಶಾಶ್ವತವಾಗಿ ಸಂಪರ್ಕ ಕಡಿತಗೊಳಿಸಲು ನೆರವಾಗುತ್ತದೆ. ಫೋನ್‌ ನಂಬರ್‌ಗಳನ್ನು ನಿಮ್ಮ ಮೊಬೈಲ್‌ನಲ್ಲಿ ಮಾತ್ರ ಬ್ಲಾಕ್‌ ಮಾಡಿದಾಗ ನಿಮ್ಮ ಖಾಸಗಿ ಸಾಧನದಲ್ಲಿ ಮಾತ್ರ ಮರೆಯಾಗುತ್ತದೆ. ಇದು ವಂಚಕರು ಹೊಸ ಸಂಖ್ಯೆಗಳನ್ನು ಬಳಸಿಕೊಂಡು ಇತರರನ್ನು ಸಂಪರ್ಕಿಸುವುದನ್ನು ತಡೆಯುವುದಿಲ್ಲ ಎಂದು ಟ್ರಾಯ್‌ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago