ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್ ಕಾಲ್ಸ್) ನಂಬರ್ಗಳನ್ನು ಬ್ಲಾಕ್ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್ಡಿ’ ಆ್ಯಪ್ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ.
ಬಳಕೆದಾರರ ದೂರಿನ ಆಧಾರದಲ್ಲಿ ಅನಪೇಕ್ಷಿತ ಕರೆ ಮತ್ತು ವಂಚನೆ ಸಂದೇಶ ಕಳುಹಿಸಿದ 21 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳ ಸಂಪರ್ಕವನ್ನು ಕಡಿತಗೊಳಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಟ್ರಾಯ್ ಹೇಳಿದೆ.
ಈ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಪ್ರಾಧಿಕಾರ, ಅನಪೇಕ್ಷಿತ ಕರೆಯ ಫೋನ್ ನಂಬರ್ಗಳನ್ನು ಟ್ರಾಯ್ ಡಿಎನ್ಡಿ ಆ್ಯಪ್ನಲ್ಲಿ ಫೋನ್ ಮಾಡುವ ಅಥವಾ ಎಸ್ಎಂಎಸ್ ಮೂಲಕ ವರದಿ ಮಾಡುವಂತೆ ಸೂಚಿಸಿದೆ.
ಇದನ್ನೂ ಓದಿ:-ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಬಳಕೆದಾರರು ಅನಪೇಕ್ಷಿತ ಕರೆಗಳ ನಂಬರ್ಗಳನ್ನು ಆ್ಯಪ್ನಲ್ಲಿ ನಮೂದಿಸಿದಾಗ ನಮಗೆ ಆ ಸಂಖ್ಯೆ ಇರುವ ಜಾಗವನ್ನು ಪತ್ತೆ ಮಾಡಲು, ಪರಿಶೀಲಿಸಲು ಮತ್ತು ಶಾಶ್ವತವಾಗಿ ಸಂಪರ್ಕ ಕಡಿತಗೊಳಿಸಲು ನೆರವಾಗುತ್ತದೆ. ಫೋನ್ ನಂಬರ್ಗಳನ್ನು ನಿಮ್ಮ ಮೊಬೈಲ್ನಲ್ಲಿ ಮಾತ್ರ ಬ್ಲಾಕ್ ಮಾಡಿದಾಗ ನಿಮ್ಮ ಖಾಸಗಿ ಸಾಧನದಲ್ಲಿ ಮಾತ್ರ ಮರೆಯಾಗುತ್ತದೆ. ಇದು ವಂಚಕರು ಹೊಸ ಸಂಖ್ಯೆಗಳನ್ನು ಬಳಸಿಕೊಂಡು ಇತರರನ್ನು ಸಂಪರ್ಕಿಸುವುದನ್ನು ತಡೆಯುವುದಿಲ್ಲ ಎಂದು ಟ್ರಾಯ್ ತಿಳಿಸಿದೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…