ಟೆಕ್‌

ಡಿಜಿಟಲ್‌ ಅರೆಸ್ಟ್‌ ಪ್ರಕರಣ ಸಿಬಿಐ ಹೆಗಲಿಗೆ

ಹೊಸದಿಲ್ಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ ಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಸೂಚಿಸಿದೆ.

ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ನೇತೃತ್ವದ ಪೀಠವು ಇದು ಪ್ಯಾನ್‌ ಇಂಡಿಯಾ ಮತ್ತು ಗಡಿಯಾಚೆಗಿನ ವಂಚನೆ ಎಸಗಿದ ಪ್ರಕರಣವಾಗಿರುವ ಕಾರಣ ಏಕರೂಪದ ಕೇಂದ್ರೀಕೃತ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಸಿಬಿಐ ತನಿಖೆಗೆ ಆದೇಶಿಸಿದೆ.

ವಿದೇಶದಲ್ಲೂ ಇದರ ಕೊಂಡಿ ಇರುವುದರಿಂದ ಈ ಪ್ರಕರಣದ ತನಿಖೆಗೆ ಜಾಗತಿಕ ಸಹಕಾರದ ಅಗತ್ಯವಿದೆ. ಹೀಗಾಗಿ ವಿಶ್ವಸಂಸ್ಥೆಯ ಸಮಾವೇಶದಲ್ಲಿ ಸೈಬರ್ ಅಪರಾಧದ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ.

ಇದನ್ನೂ ಓದಿ:-ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !

ಕಳೆದ ವಿಚಾರಣೆ ವೇಳೆ ದೇಶಾದ್ಯಂತ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನ ನಿರ್ವಹಿಸಲು ಸಿಬಿಐಗೆ ಸಂಪನ್ಮೂಲಗಳಿವೆಯೇ ಎಂದು ಕೇಂದ್ರವನ್ನು ಪ್ರಶ್ನಿಸಿತ್ತು ಆಗ ಸಿಬಿಐ ಈಗಾಗಲೇ ಕೆಲವು ಪ್ರಕರಣಗಳನ್ನು ನಿಭಾಯಿಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಬಾಗ್ಚಿ, ಎಲ್ಲಾ ಪ್ರಕರಣಗಳನ್ನ ನಿರ್ವಹಿಸಲು ಸಿಬಿಐ ಬಳಿ ಅಗತ್ಯ ಸಂಪನ್ಮೂಲಗಳಿವೆಯೇ ಪರಿಶೀಲಿಸುವಂತೆ ಸೂಚಿಸಿದ್ದರು.

ಡಿಜಿಟಲ್ ಅರೆಸ್ಟ್ ಎಂದರೇನು?
ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಒಂದು ವಿಧಾನ. ಇದರಲ್ಲಿ ವಂಚಕರು ಕಾನೂನು ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ. ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳನ್ನಾಗಿ ಮಾಡಿ ಹಣವನ್ನು ಸುಲಿಗೆ ಮಾಡುತ್ತಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago