ದೆಹಲಿ : ವಾಟ್ಸ್ಆಪ್ ಎನ್ಕ್ರಿಪ್ಶನ್ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್ ಆಪ್ ಪರ ವಕೀಲರು ದಿಲ್ಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್ಆಪ್ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದೆ.
ಈ ವೇಳೆ ಕೋರ್ಟ್ಗೆ ಹಾಜರಾದ ವಾಟ್ಸ್ಆಯಪ್ ಪರ ವಕೀಲ ತೇಜಸ್ ಕಾರಿಯಾ, ವಾಟ್ಸ್ಆಯಪ್ನ ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.
ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ ಬಳಸುತ್ತಾರೆ. ಹಾಗಾಗಿ, ಎನ್ಕ್ರಿಪ್ಶನ್ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್ ಆಪ್ ವಕೀಲರು ದಿಲ್ಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್ಆಯಪ್ ದಿಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್ಗೆ ಈ ರೀತಿ ಹೇಳಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…