ಟೆಕ್‌

ಎನ್‌ಕ್ರಿಪ್ಶನ್‌ ತೆಗೆದರೆ ಭಾರತ ತೊರೆಯುತ್ತೇವೆ : ವಾಟ್ಸ್‌ಆಪ್‌ !

ದೆಹಲಿ : ವಾಟ್ಸ್‌ಆಪ್‌ ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್‌ ಆಪ್‌ ಪರ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್‌ಆಪ್‌ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಈ ವೇಳೆ ಕೋರ್ಟ್‌ಗೆ ಹಾಜರಾದ ವಾಟ್ಸ್‌ಆಯಪ್‌ ಪರ ವಕೀಲ ತೇಜಸ್‌ ಕಾರಿಯಾ, ವಾಟ್ಸ್‌ಆಯಪ್‌ನ ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್‌ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.

ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ  ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್‌ ಆಪ್‌ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್‌ಆಯಪ್‌ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್‌ಗೆ ಈ ರೀತಿ ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

4 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago