ಟೆಕ್‌

ಎನ್‌ಕ್ರಿಪ್ಶನ್‌ ತೆಗೆದರೆ ಭಾರತ ತೊರೆಯುತ್ತೇವೆ : ವಾಟ್ಸ್‌ಆಪ್‌ !

ದೆಹಲಿ : ವಾಟ್ಸ್‌ಆಪ್‌ ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್‌ ಆಪ್‌ ಪರ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್‌ಆಪ್‌ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಈ ವೇಳೆ ಕೋರ್ಟ್‌ಗೆ ಹಾಜರಾದ ವಾಟ್ಸ್‌ಆಯಪ್‌ ಪರ ವಕೀಲ ತೇಜಸ್‌ ಕಾರಿಯಾ, ವಾಟ್ಸ್‌ಆಯಪ್‌ನ ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್‌ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.

ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ  ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್‌ ಆಪ್‌ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್‌ಆಯಪ್‌ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್‌ಗೆ ಈ ರೀತಿ ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

11 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

14 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

21 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

21 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

21 hours ago