ಟೆಕ್‌

ಎನ್‌ಕ್ರಿಪ್ಶನ್‌ ತೆಗೆದರೆ ಭಾರತ ತೊರೆಯುತ್ತೇವೆ : ವಾಟ್ಸ್‌ಆಪ್‌ !

ದೆಹಲಿ : ವಾಟ್ಸ್‌ಆಪ್‌ ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್‌ ಆಪ್‌ ಪರ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್‌ಆಪ್‌ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಈ ವೇಳೆ ಕೋರ್ಟ್‌ಗೆ ಹಾಜರಾದ ವಾಟ್ಸ್‌ಆಯಪ್‌ ಪರ ವಕೀಲ ತೇಜಸ್‌ ಕಾರಿಯಾ, ವಾಟ್ಸ್‌ಆಯಪ್‌ನ ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್‌ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.

ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ  ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್‌ ಆಪ್‌ ವಕೀಲರು ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್‌ಆಯಪ್‌ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್‌ಗೆ ಈ ರೀತಿ ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

58 mins ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

1 hour ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

2 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

2 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

5 hours ago