ದೆಹಲಿ : ವಾಟ್ಸ್ಆಪ್ ಎನ್ಕ್ರಿಪ್ಶನ್ ವ್ಯವಸ್ಥೆಗೆ ಧಕ್ಕೆಯಾದ್ರೆ ನಾವು ಭಾರತ ತೊರೆಯುತ್ತೇವೆ ಎಂದು ವಾಟ್ಸ್ ಆಪ್ ಪರ ವಕೀಲರು ದಿಲ್ಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾಗೆ ಸಂಬಂಧಿಸಿದಂತೆ 2021ರ ಮಾಹಿತಿ ಮತ್ತು ತಂತ್ರಜ್ಞಾನ ನಿಯಮದಡಿ ವಾಟ್ಸ್ಆಪ್ ಹಾಗೂ ಅದ್ರ ಮಾತೃ ಸಂಸ್ಥೆ ಮೆಟಾ ಕಂಪನಿಯನ್ನ ದಿಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿದೆ.
ಈ ವೇಳೆ ಕೋರ್ಟ್ಗೆ ಹಾಜರಾದ ವಾಟ್ಸ್ಆಯಪ್ ಪರ ವಕೀಲ ತೇಜಸ್ ಕಾರಿಯಾ, ವಾಟ್ಸ್ಆಯಪ್ನ ಎಂಡ್-ಟು-ಎಂಡ್ ಎನ್ಕ್ರಿಪ್ಶನ್ ಯಾವುದೇ ವ್ಯಕ್ತಿ ಇನ್ನೊಬ್ಬರಿಗೆ ಕಳುಹಿಸೊ ಮೆಸೇಜ್ನ್ನ ಬೇರೆಯವ್ರು ನೋಡಲು ಆಗದಿರೊ ಸುರಕ್ಷತಾ ವ್ಯವಸ್ಥೆ ಹೊಂದಿದೆ.
ಈ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್ನ್ನ ಬೇರೆಯವ್ರು ಓದೊದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗೊದಿಲ್ಲ ಅಂತ ಬಳಸುತ್ತಾರೆ. ಹಾಗಾಗಿ, ಎನ್ಕ್ರಿಪ್ಶನ್ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯೊದಿಲ್ಲ ಎಂದು ವಾಟ್ಸ್ ಆಪ್ ವಕೀಲರು ದಿಲ್ಲಿ ಹೈಕೋರ್ಟ್ಗೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 2021ರಲ್ಲಿ ಐಟಿ ವಿಭಾಗದಲ್ಲಿ ಕೆಲ ನಿಯಮಗಳನ್ನ ಜಾರಿ ತಂದಿತ್ತು. ಅದನ್ನ ಪ್ರಶ್ನಿಸಿ ವಾಟ್ಸ್ಆಯಪ್ ದಿಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಅರ್ಜಿಯ ವಿಚಾರಣೆ ವೇಳೆ ಅದ್ರ ವಕೀಲರು ಕೋರ್ಟ್ಗೆ ಈ ರೀತಿ ಹೇಳಿದ್ದಾರೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…