ಟೆಕ್‌

ಮೊಬೈಲ್‌ ಬ್ಯಾಟರಿ ಹೆಚ್ಚು ಬಾಳಿಕೆ ಬರಬೇಕು ಎಂದರೆ ಹೀಗೆ ಮಾಡಿ…..

ಪ್ರತಿಯೊಬ್ಬರೂ ಈಗ ಸ್ಮಾರ್ಟ್ ಫೋನ್‌ಗಳಿಗೆ ಅಡಿಕ್ಟ್ ಆಗಿ ಹೋಗಿದ್ದಾರೆ. ಪ್ರಯಾಣದಲ್ಲಿರುವಾಗ, ಸುಮ್ಮನೆ ಕುಳಿತಿರುವಾಗ, ಕೆಲಸದ ವೇಳೆ, ಊಟದ ಸಮಯದಲ್ಲೂ ಸ್ಮಾರ್ಟ್ ಫೋನ್ ಬೇಕೇ ಬೇಕು. ಹೀಗೆ ದಿನದ ಬಹುತೇಕ ಸಮಯ ಸ್ಮಾರ್ಟ್ ಫೋನ್ ನೋಡುತ್ತಿದ್ದರೆ, ಅದರ ಬ್ಯಾಟರಿ ಬಾಳಿಕೆ ಬರುವುದಾದರೂ ಹೇಗೆ?

ಎಷ್ಟೇ ಸಂಶೋಧನೆಗಳು ನಡೆದರೂ ಹೆಚ್ಚು ಸಾಮರ್ಥ್ಯದ ಬ್ಯಾಟರಿಗಳಿಗಾಗಿ ಫೋನ್ ಗಾತ್ರವನ್ನೇ ಹಿಗ್ಗಿಸಬೇಕಾದ ಅನಿವಾರ್ಯತೆ ಇದೆ. ಫೋನ್‌ಗಳ ಬ್ಯಾಟರಿ ಬೇಗ ಚಾರ್ಚ್ ಮುಗಿದುಹೋಗಲು ಸಾಕಷ್ಟು ಕಾರಣಗಳಿವೆ. ಸಾಧನಗಳ ಗಾತ್ರ, ತೀಕ್ಷ್ಣ ಪ್ರಖರತೆಯಿರುವ ಸ್ಕ್ರೀನ್, ವೇಗದ ಪ್ರೊಸೆಸರ್‌ಗಳು, ಹಿನ್ನೆಲೆಯಲ್ಲಿ ಕೆಲಸ ಮಾಡುವ ಸಾಫ್ಟ್‌ವೇರ್‌ಗಳು, ವೇಗದ ಇಂಟರ್ ನೆಟ್, ಹೆಚ್ಚಿನ ಪ್ರಮಾಣದ ಗೇಮಿಂಗ್ ಹೀಗೆ ವಿವಿಧ ಕಾರಣಗಳಿಂದ ಚಾರ್ಚ್ ಬೇಗ ಕಡಿಮೆಯಾಗುತ್ತದೆ. ಬ್ಯಾಟರಿ ಚಾರ್ಜ್ ಹೆಚ್ಚು ಕಾಲ ಉಳಿಯುವಂತೆ ಮಾಡುವ ಕುರಿತು ವಿಜ್ಞಾನಿಗಳು ಸಂಶೋಧನೆಗಳನ್ನು ಮುಂದುವರಿಸುತ್ತಲೇ ಇದ್ದಾರೆ.

ಸ್ಮಾರ್ಟ್ ಫೋನ್ ಅಥವಾ ಯಾವುದೇ ಗ್ಯಾಜೆಟ್ಟನ್ನು ರಾತ್ರಿಯಿಡೀ ಚಾರ್ಜ್ ಇಡಬಹುದೇ? ಶೇ. ೧೦೦ರಷ್ಟು ಚಾರ್ಜ್ ಮಾಡಬಾರದೇ? ಎಂಬೆಲ್ಲ ಪ್ರಶ್ನೆಗಳು ಜನರಲ್ಲಿವೆ. ಈ ಹಿಂದೆ ಚಾರ್ಜ್‌ಗೆ ಇಟ್ಟ ಫೋನ್‌ಗಳು ಓವರ್ ಚಾರ್ಜ್ ಆಗಿ ಸ್ಛೋಟಗೊಂಡಿರುವ ಉದಾಹರಣೆ ಗಳಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಕಡಿಮೆಯಾಗಿದೆ. ಮೊಬೈಲ್ ಬ್ಯಾಟರಿಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈಗ ರಾತ್ರಿಯಿಡೀ ಚಾರ್ಚ್ ಮಾಡಿದರೂ ಏನೂ ಆಗದಂತಹ ತಂತ್ರಜ್ಞಾನವನ್ನು ಬಹುತೇಕ ಮೊಬೈಲ್ ಫೋನ್ ತಯಾರಿಕಾ ಸಂಸ್ಥೆಗಳು ಅಳವಡಿಸಿಕೊಂಡಿವೆ. ಅಂದರೆ ಶೇ. ೧೦೦ರಷ್ಟು ಚಾರ್ಜ್ ಆದ ಬಳಿಕ ವಿದ್ಯುತ್ ಪ್ರವಾಹವು ಕಡಿತವಾಗುವ ತಂತ್ರಜ್ಞಾನ ಬಂದಿದೆ.

ಚಾರ್ಜ್ ಮಾಡುವಾಗ ಈ ಅಂಶಗಳು ನೆನಪಿರಲಿ

೧. ಚಾರ್ಜ್ ಮಾಡುವಾಗ ಫೋನ್‌ಗೆ ಗಾಳಿಯಾಡುವಂತೆ ನೋಡಿಕೊಳ್ಳಿ. ಗಾಳಿಯಾಡದಿದ್ದರೆ ಫೋನ್ ಬಿಸಿಯಾಗಿ ಬ್ಯಾಟರಿ ಮೇಲೆ ಪರಿಣಾಮ ಬೀರಬಹುದು.
೨. ಶೇ. ೧೦೦ರಷ್ಟು ಚಾರ್ಜ್ ಬದಲು ಶೇ. ೮೦- ಶೇ. ೯೦ರಷ್ಟು ಚಾರ್ಜ್ ಮಾಡಿಕೊಳ್ಳಿ. ಶೇ. ೦ ಆಗದಂತೆ
ನೋಡಿಕೊಳ್ಳಬೇಕು.
೩. ಫೋನ್ ಸ್ಕ್ರೀನ್ ಪ್ರಖರತೆ ಕಡಿಮೆ ಮಾಡಿದಷ್ಟು ಕಣ್ಣಿಗೂ ಹಿತ, ಬ್ಯಾಟರಿಯೂ ಹೆಚ್ಚು ಬಾಳಿಕೆ ಬರಲಿದೆ.
೪. ಕೆಲಸ ಮಾಡುವಾಗ ಅಥವಾ ಮೊಬೈಲ್ ಬಳಸದಿದ್ದಾಗ ಸ್ಕ್ರೀನ್ ಆಫ್ ಆಗುವಂತೆ ಟೈಮ್ ಸೆಟ್ ಮಾಡಿಕೊಳ್ಳಬೇಕು.
೫. ಲೊಕೇಶನ್, ವೈರ್‌ಲೆಸ್, ಬ್ಲೂಟೂತ್ ಸೇವೆಗಳು ಮತ್ತು ಇಂಟರ್‌ನೆಟ್, ವೈಫೈ ಕೂಡ ಸದಾ ಕಾಲ ಆನ್‌ನಲ್ಲಿ ಇದ್ದರೆ ಬ್ಯಾಟರಿ ಚಾರ್ಜ್ ಖರ್ಚಾಗುತ್ತದೆ. ಇದಕ್ಕಾಗಿ ಅಗತ್ಯವಿದ್ದಾಗಲಷ್ಟೇ ಅವುಗಳನ್ನು ಆನ್ ಮಾಡಿಕೊಳ್ಳಿ.
೬. ಬಳಕೆಯಾಗದಿರುವ ಆಪ್‌ಗಳನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಬೇಕು.
೭. ಪವರ್ ಸೇವಿಂಗ್ ಅಥವಾ ಬ್ಯಾಟರಿ ಸೇವರ್ ಮೋಡ್ ಆನ್ ಮಾಡಿಕೊಳ್ಳುವುದು ಉತ್ತಮ.

 

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

10 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

13 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

20 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

20 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

20 hours ago