ಟೆಕ್‌

ಭಾರತದ ಮೊದಲ ಹೈಪರ್‌ಲೂಪ್‌ ರೈಲು ಕನಸು ಶೀಘ್ರ ನನಸು!

ಬೆಂಗಳೂರು: ಭಾರತದ ಮೊದಲ ಹೈಪರ್‌ಲೂಪ್‌ ಸಾರಿಗೆ ಸೇವೆಯು ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಈ ಮೂಲಕ ಹೈಪರ್‌ಲೂಪ್‌ ರೈಲು ಯೋಜನೆಗೆ ಮತ್ತಷ್ಟು ವೇಗ ಸಿಕ್ಕಿದೆ.

ಕೇಂದ್ರ ರೈಲ್ವೆ ಖಾತೆ ಸಚವ ಅಶ್ವಿನ್‌ ವೈಷ್ಣವ್‌ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ದೇಶದ ಮೊದಲ ಹೈಪರ್‌ ಲೂಪ್‌ ರೈಲಿನ ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಯಶಸ್ವಿಯಾಗಿ ಈ ಟ್ರ್ಯಾಕ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮದ್ರಾಸ್‌ ಐಐಟಿಯ ಆವಿಷ್ಕಾರ ಹೈಪರ್‌ಲೂಪ್‌ ಟೀಂ ಮತ್ತು TuTr ಎಂಬ ಸ್ಪಾರ್ಟ್‌ಅಪ್‌ ಭಾರತೀಯ ರೈಲ್ವೆಯ ಮುಂದಾಳತ್ವದಲ್ಲಿ ಹೈಪರ್‌ಲೂಪ್‌ ಸಾರಿಗೆ ಸೇವೆ ಪರಿಚಯಿಸು ಹೊಣೆ ಹೊತ್ತುಕೊಂಡಿದೆ.

ಐಐಟಿ ಕ್ಯಾಂಪಸ್‌ನಲ್ಲಿ 410ಮೀಟರ್‌ ಉದ್ದದ ಹೈಪರ್‌ಲೂಪ್‌ ಟೆಸ್ಟ್‌ ಟ್ಯ್ರಾಕ್‌ ಅನ್ನು ಯಶಸ್ವಿಯಾಗಿ ನಿರ್ಮಿಹಿಸಿದೆ ಈ ತಂಡ.

ಹೈಪರ್‌ಲೂಪ್‌ ಎಂಬುದು ಹಳಿಯನ್ನು ಆಧಾರವಾಗಿಟ್ಟುಕೊಂಡು ನಿರ್ವಾತ ಕೊಳವೆಗಳಿಂದ ನಿರ್ಮಿಸಿದ ಒಂದು ಸಾರಿಗೆ ಮಾರ್ಗ. ಇದರ ಕ್ಯಾಬಿನ್ ಗಳಲ್ಲಿ 24 ರಿಂದ 28 ಜನ ಕೂತು ಗಂಟೆಗೆ ಗರಿಷ್ಠ 1,100 ಕಿ.ಮೀ ವೇಗದಲ್ಲಿ ಪ್ರಯಾಣಿಸಬಹುದು.

ಭಾರತದಲ್ಲಿ ಮುಂಬೈ-ಪುಣೆ ಮಾರ್ಗದಲ್ಲಿ ಹೈಪರ್‌ಲೂಪ್‌ ಆರಂಭಿಸುವ ಯೋಜನೆಯನ್ನು ಭಾರತೀಯ ರೈಲ್ವೆ ಹಾಕಿಕೊಂಡಿದೆ. ಈ ಮಾರ್ಗದಲ್ಲಿ ಈ ಯೋಜನೆ ಆರಂಭವಾದರೆ 150ಕಿ.ಮೀ ದೂರವನ್ನು ಕೇವಲ 25 ನಿಮಿಷದಲ್ಲಿ ಕ್ರಮಿಸಬಹುದು ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

4 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

6 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

39 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

51 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

57 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago