ಟೆಕ್‌

ಭಾರತದ ಮೊದಲ ಹೈಪರ್‌ಲೂಪ್‌ ರೈಲು ಕನಸು ಶೀಘ್ರ ನನಸು!

ಬೆಂಗಳೂರು: ಭಾರತದ ಮೊದಲ ಹೈಪರ್‌ಲೂಪ್‌ ಸಾರಿಗೆ ಸೇವೆಯು ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಈ ಮೂಲಕ ಹೈಪರ್‌ಲೂಪ್‌ ರೈಲು ಯೋಜನೆಗೆ ಮತ್ತಷ್ಟು ವೇಗ ಸಿಕ್ಕಿದೆ.

ಕೇಂದ್ರ ರೈಲ್ವೆ ಖಾತೆ ಸಚವ ಅಶ್ವಿನ್‌ ವೈಷ್ಣವ್‌ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ದೇಶದ ಮೊದಲ ಹೈಪರ್‌ ಲೂಪ್‌ ರೈಲಿನ ಟೆಸ್ಟ್‌ ಟ್ರ್ಯಾಕ್‌ ಪೂರ್ಣಗೊಂಡಿದೆ. ಯಶಸ್ವಿಯಾಗಿ ಈ ಟ್ರ್ಯಾಕ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮದ್ರಾಸ್‌ ಐಐಟಿಯ ಆವಿಷ್ಕಾರ ಹೈಪರ್‌ಲೂಪ್‌ ಟೀಂ ಮತ್ತು TuTr ಎಂಬ ಸ್ಪಾರ್ಟ್‌ಅಪ್‌ ಭಾರತೀಯ ರೈಲ್ವೆಯ ಮುಂದಾಳತ್ವದಲ್ಲಿ ಹೈಪರ್‌ಲೂಪ್‌ ಸಾರಿಗೆ ಸೇವೆ ಪರಿಚಯಿಸು ಹೊಣೆ ಹೊತ್ತುಕೊಂಡಿದೆ.

ಐಐಟಿ ಕ್ಯಾಂಪಸ್‌ನಲ್ಲಿ 410ಮೀಟರ್‌ ಉದ್ದದ ಹೈಪರ್‌ಲೂಪ್‌ ಟೆಸ್ಟ್‌ ಟ್ಯ್ರಾಕ್‌ ಅನ್ನು ಯಶಸ್ವಿಯಾಗಿ ನಿರ್ಮಿಹಿಸಿದೆ ಈ ತಂಡ.

ಹೈಪರ್‌ಲೂಪ್‌ ಎಂಬುದು ಹಳಿಯನ್ನು ಆಧಾರವಾಗಿಟ್ಟುಕೊಂಡು ನಿರ್ವಾತ ಕೊಳವೆಗಳಿಂದ ನಿರ್ಮಿಸಿದ ಒಂದು ಸಾರಿಗೆ ಮಾರ್ಗ. ಇದರ ಕ್ಯಾಬಿನ್ ಗಳಲ್ಲಿ 24 ರಿಂದ 28 ಜನ ಕೂತು ಗಂಟೆಗೆ ಗರಿಷ್ಠ 1,100 ಕಿ.ಮೀ ವೇಗದಲ್ಲಿ ಪ್ರಯಾಣಿಸಬಹುದು.

ಭಾರತದಲ್ಲಿ ಮುಂಬೈ-ಪುಣೆ ಮಾರ್ಗದಲ್ಲಿ ಹೈಪರ್‌ಲೂಪ್‌ ಆರಂಭಿಸುವ ಯೋಜನೆಯನ್ನು ಭಾರತೀಯ ರೈಲ್ವೆ ಹಾಕಿಕೊಂಡಿದೆ. ಈ ಮಾರ್ಗದಲ್ಲಿ ಈ ಯೋಜನೆ ಆರಂಭವಾದರೆ 150ಕಿ.ಮೀ ದೂರವನ್ನು ಕೇವಲ 25 ನಿಮಿಷದಲ್ಲಿ ಕ್ರಮಿಸಬಹುದು ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

8 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

11 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

15 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

18 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

18 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

18 hours ago