ಟೆಕ್‌

ಪ್ರೋಬಾ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.

ಪಿಎಸ್‌ಎಲ್‌ವಿ ಸಿ-59 ರಾಕೆಟ್‌ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) ಜೊತೆ ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ಪ್ರಪಂಚದ ಮೊದಲ ಮಿಷನ್‌ ಎಂದು ಕರೆಸಿಕೊಂಡ ʼಪ್ರೋಬಾ-3ʼ ಯಲ್ಲಿ ʼಕರೋನಾಗ್ರಾಫ್‌ʼ (310 ಕೆ.ಜಿ) ಮತ್ತು ʼಆಕಲ್ಟರ್‌ʼ (240 ಕೆ.ಜಿ. ತೂಕ) ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ಒಟ್ಟಿಗೆ ಉಡಾವಣೆ ಮಾಡಲಾಗಿದೆ. ಇವು ಮೊದಲ ಕಕ್ಷೆಯನ್ನು ತಲುಪಿದ ನಂತರ ಎರಡೂ ಉಪಗ್ರಹಗಳು 150 ಮೀಟರ್‌ ಅಂತರದಲ್ಲಿ ಒಂದು ದೊಡ್ಡ ಉಪಗ್ರಹವಾಗಿ ಒಟ್ಟಿಗೆ ಹಾರುತ್ತವೆ.

ಈ ಕಾರ್ಯಾಚರಣೆಯ ಉದ್ದೇಶ ಸೂರ್ಯನ ಹೊರಗಿನ ವಾತಾವರಣ ಹಾಗೂ ಬಾಹ್ಯಾಕಾಶ ನೌಕೆಗಳ ನಿಖರ ಚಲನೆ ಅಧ್ಯಯನ ಮಾಡುವುದು ಎಂದು ಇಎಸ್‌ಎ ಹೇಳಿದೆ.

ಈ ಉಪಗ್ರಹಗಳು ಬಾಹ್ಯಾಕಾಶ ಸೇರುತ್ತಿದ್ದಂತೆ ಕೃತಕ ಸೂರ್ಯಗ್ರಹಣ ಸೃಷ್ಠಿಸಿ, ಸೂರ್ಯನ ಕರೋನಾಗ್ರಾಫ್ ಅಧ್ಯಯನ ಮಾಡಲು ಸಹಾಯ ಮಾಡುತ್ತವೆ. ಇದರಿಂದಾಗಿ ಸೂರ್ಯನ ಮೇಲಿನ ವಾತಾವರಣದ ಬಗ್ಗೆ ಸಂಶೋಧನೆ ಮಾಡಲು ಬಾಹ್ಯಾಕಾಶ ವಿಜ್ಞಾನಿಗಳಿಗೆ ಇದೊಂದು ಪ್ರಮುಖ ಉದ್ದೇಶವಾಗಿದೆ ಎಂದು ಇಸ್ರೋ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

12 mins ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

23 mins ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

1 hour ago

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 hours ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

2 hours ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

2 hours ago