ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್ಎಲ್ವಿ ರಾಕೆಟ್ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.
ಪಿಎಸ್ಎಲ್ವಿ ಸಿ-59 ರಾಕೆಟ್ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) ಜೊತೆ ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
ಪ್ರಪಂಚದ ಮೊದಲ ಮಿಷನ್ ಎಂದು ಕರೆಸಿಕೊಂಡ ʼಪ್ರೋಬಾ-3ʼ ಯಲ್ಲಿ ʼಕರೋನಾಗ್ರಾಫ್ʼ (310 ಕೆ.ಜಿ) ಮತ್ತು ʼಆಕಲ್ಟರ್ʼ (240 ಕೆ.ಜಿ. ತೂಕ) ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ಒಟ್ಟಿಗೆ ಉಡಾವಣೆ ಮಾಡಲಾಗಿದೆ. ಇವು ಮೊದಲ ಕಕ್ಷೆಯನ್ನು ತಲುಪಿದ ನಂತರ ಎರಡೂ ಉಪಗ್ರಹಗಳು 150 ಮೀಟರ್ ಅಂತರದಲ್ಲಿ ಒಂದು ದೊಡ್ಡ ಉಪಗ್ರಹವಾಗಿ ಒಟ್ಟಿಗೆ ಹಾರುತ್ತವೆ.
ಈ ಕಾರ್ಯಾಚರಣೆಯ ಉದ್ದೇಶ ಸೂರ್ಯನ ಹೊರಗಿನ ವಾತಾವರಣ ಹಾಗೂ ಬಾಹ್ಯಾಕಾಶ ನೌಕೆಗಳ ನಿಖರ ಚಲನೆ ಅಧ್ಯಯನ ಮಾಡುವುದು ಎಂದು ಇಎಸ್ಎ ಹೇಳಿದೆ.
ಈ ಉಪಗ್ರಹಗಳು ಬಾಹ್ಯಾಕಾಶ ಸೇರುತ್ತಿದ್ದಂತೆ ಕೃತಕ ಸೂರ್ಯಗ್ರಹಣ ಸೃಷ್ಠಿಸಿ, ಸೂರ್ಯನ ಕರೋನಾಗ್ರಾಫ್ ಅಧ್ಯಯನ ಮಾಡಲು ಸಹಾಯ ಮಾಡುತ್ತವೆ. ಇದರಿಂದಾಗಿ ಸೂರ್ಯನ ಮೇಲಿನ ವಾತಾವರಣದ ಬಗ್ಗೆ ಸಂಶೋಧನೆ ಮಾಡಲು ಬಾಹ್ಯಾಕಾಶ ವಿಜ್ಞಾನಿಗಳಿಗೆ ಇದೊಂದು ಪ್ರಮುಖ ಉದ್ದೇಶವಾಗಿದೆ ಎಂದು ಇಸ್ರೋ ತಿಳಿಸಿದೆ.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…