ಟೆಕ್‌

ಪ್ರೋಬಾ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.

ಪಿಎಸ್‌ಎಲ್‌ವಿ ಸಿ-59 ರಾಕೆಟ್‌ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) ಜೊತೆ ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ಪ್ರಪಂಚದ ಮೊದಲ ಮಿಷನ್‌ ಎಂದು ಕರೆಸಿಕೊಂಡ ʼಪ್ರೋಬಾ-3ʼ ಯಲ್ಲಿ ʼಕರೋನಾಗ್ರಾಫ್‌ʼ (310 ಕೆ.ಜಿ) ಮತ್ತು ʼಆಕಲ್ಟರ್‌ʼ (240 ಕೆ.ಜಿ. ತೂಕ) ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ಒಟ್ಟಿಗೆ ಉಡಾವಣೆ ಮಾಡಲಾಗಿದೆ. ಇವು ಮೊದಲ ಕಕ್ಷೆಯನ್ನು ತಲುಪಿದ ನಂತರ ಎರಡೂ ಉಪಗ್ರಹಗಳು 150 ಮೀಟರ್‌ ಅಂತರದಲ್ಲಿ ಒಂದು ದೊಡ್ಡ ಉಪಗ್ರಹವಾಗಿ ಒಟ್ಟಿಗೆ ಹಾರುತ್ತವೆ.

ಈ ಕಾರ್ಯಾಚರಣೆಯ ಉದ್ದೇಶ ಸೂರ್ಯನ ಹೊರಗಿನ ವಾತಾವರಣ ಹಾಗೂ ಬಾಹ್ಯಾಕಾಶ ನೌಕೆಗಳ ನಿಖರ ಚಲನೆ ಅಧ್ಯಯನ ಮಾಡುವುದು ಎಂದು ಇಎಸ್‌ಎ ಹೇಳಿದೆ.

ಈ ಉಪಗ್ರಹಗಳು ಬಾಹ್ಯಾಕಾಶ ಸೇರುತ್ತಿದ್ದಂತೆ ಕೃತಕ ಸೂರ್ಯಗ್ರಹಣ ಸೃಷ್ಠಿಸಿ, ಸೂರ್ಯನ ಕರೋನಾಗ್ರಾಫ್ ಅಧ್ಯಯನ ಮಾಡಲು ಸಹಾಯ ಮಾಡುತ್ತವೆ. ಇದರಿಂದಾಗಿ ಸೂರ್ಯನ ಮೇಲಿನ ವಾತಾವರಣದ ಬಗ್ಗೆ ಸಂಶೋಧನೆ ಮಾಡಲು ಬಾಹ್ಯಾಕಾಶ ವಿಜ್ಞಾನಿಗಳಿಗೆ ಇದೊಂದು ಪ್ರಮುಖ ಉದ್ದೇಶವಾಗಿದೆ ಎಂದು ಇಸ್ರೋ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

10 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

13 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

16 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

20 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

20 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

20 hours ago