ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್ಎಲ್ವಿ ರಾಕೆಟ್ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.
ಪಿಎಸ್ಎಲ್ವಿ ಸಿ-59 ರಾಕೆಟ್ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) ಜೊತೆ ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
ಪ್ರಪಂಚದ ಮೊದಲ ಮಿಷನ್ ಎಂದು ಕರೆಸಿಕೊಂಡ ʼಪ್ರೋಬಾ-3ʼ ಯಲ್ಲಿ ʼಕರೋನಾಗ್ರಾಫ್ʼ (310 ಕೆ.ಜಿ) ಮತ್ತು ʼಆಕಲ್ಟರ್ʼ (240 ಕೆ.ಜಿ. ತೂಕ) ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ಒಟ್ಟಿಗೆ ಉಡಾವಣೆ ಮಾಡಲಾಗಿದೆ. ಇವು ಮೊದಲ ಕಕ್ಷೆಯನ್ನು ತಲುಪಿದ ನಂತರ ಎರಡೂ ಉಪಗ್ರಹಗಳು 150 ಮೀಟರ್ ಅಂತರದಲ್ಲಿ ಒಂದು ದೊಡ್ಡ ಉಪಗ್ರಹವಾಗಿ ಒಟ್ಟಿಗೆ ಹಾರುತ್ತವೆ.
ಈ ಕಾರ್ಯಾಚರಣೆಯ ಉದ್ದೇಶ ಸೂರ್ಯನ ಹೊರಗಿನ ವಾತಾವರಣ ಹಾಗೂ ಬಾಹ್ಯಾಕಾಶ ನೌಕೆಗಳ ನಿಖರ ಚಲನೆ ಅಧ್ಯಯನ ಮಾಡುವುದು ಎಂದು ಇಎಸ್ಎ ಹೇಳಿದೆ.
ಈ ಉಪಗ್ರಹಗಳು ಬಾಹ್ಯಾಕಾಶ ಸೇರುತ್ತಿದ್ದಂತೆ ಕೃತಕ ಸೂರ್ಯಗ್ರಹಣ ಸೃಷ್ಠಿಸಿ, ಸೂರ್ಯನ ಕರೋನಾಗ್ರಾಫ್ ಅಧ್ಯಯನ ಮಾಡಲು ಸಹಾಯ ಮಾಡುತ್ತವೆ. ಇದರಿಂದಾಗಿ ಸೂರ್ಯನ ಮೇಲಿನ ವಾತಾವರಣದ ಬಗ್ಗೆ ಸಂಶೋಧನೆ ಮಾಡಲು ಬಾಹ್ಯಾಕಾಶ ವಿಜ್ಞಾನಿಗಳಿಗೆ ಇದೊಂದು ಪ್ರಮುಖ ಉದ್ದೇಶವಾಗಿದೆ ಎಂದು ಇಸ್ರೋ ತಿಳಿಸಿದೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…