ಟೆಕ್‌

ಪ್ರೋಬಾ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ.

ಪಿಎಸ್‌ಎಲ್‌ವಿ ಸಿ-59 ರಾಕೆಟ್‌ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) ಜೊತೆ ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ಪ್ರಪಂಚದ ಮೊದಲ ಮಿಷನ್‌ ಎಂದು ಕರೆಸಿಕೊಂಡ ʼಪ್ರೋಬಾ-3ʼ ಯಲ್ಲಿ ʼಕರೋನಾಗ್ರಾಫ್‌ʼ (310 ಕೆ.ಜಿ) ಮತ್ತು ʼಆಕಲ್ಟರ್‌ʼ (240 ಕೆ.ಜಿ. ತೂಕ) ಎಂಬ ಎರಡು ಬಾಹ್ಯಾಕಾಶ ನೌಕೆಗಳನ್ನು ಒಟ್ಟಿಗೆ ಉಡಾವಣೆ ಮಾಡಲಾಗಿದೆ. ಇವು ಮೊದಲ ಕಕ್ಷೆಯನ್ನು ತಲುಪಿದ ನಂತರ ಎರಡೂ ಉಪಗ್ರಹಗಳು 150 ಮೀಟರ್‌ ಅಂತರದಲ್ಲಿ ಒಂದು ದೊಡ್ಡ ಉಪಗ್ರಹವಾಗಿ ಒಟ್ಟಿಗೆ ಹಾರುತ್ತವೆ.

ಈ ಕಾರ್ಯಾಚರಣೆಯ ಉದ್ದೇಶ ಸೂರ್ಯನ ಹೊರಗಿನ ವಾತಾವರಣ ಹಾಗೂ ಬಾಹ್ಯಾಕಾಶ ನೌಕೆಗಳ ನಿಖರ ಚಲನೆ ಅಧ್ಯಯನ ಮಾಡುವುದು ಎಂದು ಇಎಸ್‌ಎ ಹೇಳಿದೆ.

ಈ ಉಪಗ್ರಹಗಳು ಬಾಹ್ಯಾಕಾಶ ಸೇರುತ್ತಿದ್ದಂತೆ ಕೃತಕ ಸೂರ್ಯಗ್ರಹಣ ಸೃಷ್ಠಿಸಿ, ಸೂರ್ಯನ ಕರೋನಾಗ್ರಾಫ್ ಅಧ್ಯಯನ ಮಾಡಲು ಸಹಾಯ ಮಾಡುತ್ತವೆ. ಇದರಿಂದಾಗಿ ಸೂರ್ಯನ ಮೇಲಿನ ವಾತಾವರಣದ ಬಗ್ಗೆ ಸಂಶೋಧನೆ ಮಾಡಲು ಬಾಹ್ಯಾಕಾಶ ವಿಜ್ಞಾನಿಗಳಿಗೆ ಇದೊಂದು ಪ್ರಮುಖ ಉದ್ದೇಶವಾಗಿದೆ ಎಂದು ಇಸ್ರೋ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

5 mins ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

12 mins ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

1 hour ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago