ಟೆಕ್‌

ಇಸ್ರೊ ಚಾರಿತ್ರಿಕ ಸಾಧನೆ ; ಕಕ್ಷೆ ಸೇರಿದ ಅತ್ಯಂತ ಭಾರದ ಉಪಗ್ರಹ

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಈ ರಾಕೆಟ್ ಉಡಾವಣೆಯಾಯಿತು. ಇದು ಇಲ್ಲಿಯವರೆಗೆ ಇಸ್ರೋ ಉಡಾಯಿಸಿದ ಅತ್ಯಂತ ಭಾರದ ಉಪಗ್ರಹ ಎಂಬುದು ಗಮನಾರ್ಹ. ಸಂಸ್ಥೆ 4,400 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿರುವುದು ಇದೇ ಮೊದಲು ಎಂದು ಇಸ್ರೋ ಪ್ರಕಟಣೆ ತಿಳಿಸಿದೆ.

ಈ ಉಪಗ್ರಹವು ಭಾರತೀಯ ಭೂಮಿ ಮತ್ತು ಸಮುದ್ರ ಪ್ರದೇಶಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತದೆ. ನೌಕಾಪಡೆಗೆ ಗಮನಾರ್ಹ ಪ್ರಯೋಜನ ನೀಡಲಿದೆ. ಹೆಚ್ಚು ಸಾಮರ್ಥ್ಯದ ಬ್ಯಾಂಡ್‌ವಿಡ್ತ್‌ಗೆ ಪ್ರವೇಶ ಒದಗಿಸುತ್ತದೆ. ದೂರದ ಪ್ರದೇಶಗಳಿಗೆ ಡಿಜಿಟಲ್ ಸಂಪರ್ಕವನ್ನು ಸುಗಮಗೊಳಿಸುತ್ತದೆ.

ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

‘ಬಾಹುಬಲಿ’ ಗಾತ್ರದ ರಾಕೆಟ್
43.5 ಮೀಟರ್ ಉದ್ದದ ರಾಕೆಟ್ 8,000 ಕೆ.ಜಿ ತೂಕದ ಪೇಲೋಡ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದೇ ಕಾರಣಕ್ಕೆ “ಬಾಹುಬಲಿ ರಾಕೆಟ್” ಎಂದು ಕರೆಯಲಾಗಿದೆ.

500 ಕೋಟಿ ರೂ. ವೆಚ್ಚ
ಈ ಮಿಷನ್‌ಗಾಗಿ ಸುಮಾರು 500 ಕೋಟಿ ರೂ ವೆಚ್ಚವಾಗಿದ್ದು, ಸಂಪೂರ್ಣವಾಗಿ “ಮೇಕ್ ಇನ್ ಇಂಡಿಯಾ” ಉಪಕ್ರಮದಡಿಯಲ್ಲೇ ಅಭಿವೃದ್ಧಿಪಡಿಸಲಾಗಿದೆ. ಬಾಹುಬಲಿ ರಾಕೆಟ್ ಅನ್ನು ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ” ಕಾರ್ಯಾಚರಣೆಯಲ್ಲೂ ಬಳಸಲಾಗುತ್ತಿದೆ.

ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹ
ಇಸ್ರೋ ಒದಗಿಸಿದ ಮಾಹಿತಿಯ ಪ್ರಕಾರ, “ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹವು CMS-03 ಭಾರತೀಯ ಮುಖ್ಯ ಭೂಭಾಗ ಸೇರಿದಂತೆ ವಿಶಾಲ ಸಮುದ್ರ ಪ್ರದೇಶಕ್ಕೆ ಸೇವೆಗಳನ್ನು ಒದಗಿಸುತ್ತದೆ. ಈ ಉಪಗ್ರಹ ‘C’, ‘Extended C’, ‘Q’ ಬ್ಯಾಂಡ್‌ಗಳಲ್ಲಿ ವಾಯ್ಸ್​, ಡೇಟಾ ಮತ್ತು ವಿಡಿಯೋ ಲಿಂಕ್‌ಗಳಿಗೆ ಟ್ರಾನ್ಸ್‌ಪಾಂಡರ್ ಸೌಲಭ್ಯಗಳನ್ನು ಒದಗಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

40 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

1 hour ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

3 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago