ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್ನಿಂದ ಈ ರಾಕೆಟ್ ಉಡಾವಣೆಯಾಯಿತು. ಇದು ಇಲ್ಲಿಯವರೆಗೆ ಇಸ್ರೋ ಉಡಾಯಿಸಿದ ಅತ್ಯಂತ ಭಾರದ ಉಪಗ್ರಹ ಎಂಬುದು ಗಮನಾರ್ಹ. ಸಂಸ್ಥೆ 4,400 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿರುವುದು ಇದೇ ಮೊದಲು ಎಂದು ಇಸ್ರೋ ಪ್ರಕಟಣೆ ತಿಳಿಸಿದೆ.
ಈ ಉಪಗ್ರಹವು ಭಾರತೀಯ ಭೂಮಿ ಮತ್ತು ಸಮುದ್ರ ಪ್ರದೇಶಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತದೆ. ನೌಕಾಪಡೆಗೆ ಗಮನಾರ್ಹ ಪ್ರಯೋಜನ ನೀಡಲಿದೆ. ಹೆಚ್ಚು ಸಾಮರ್ಥ್ಯದ ಬ್ಯಾಂಡ್ವಿಡ್ತ್ಗೆ ಪ್ರವೇಶ ಒದಗಿಸುತ್ತದೆ. ದೂರದ ಪ್ರದೇಶಗಳಿಗೆ ಡಿಜಿಟಲ್ ಸಂಪರ್ಕವನ್ನು ಸುಗಮಗೊಳಿಸುತ್ತದೆ.
ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್
‘ಬಾಹುಬಲಿ’ ಗಾತ್ರದ ರಾಕೆಟ್
43.5 ಮೀಟರ್ ಉದ್ದದ ರಾಕೆಟ್ 8,000 ಕೆ.ಜಿ ತೂಕದ ಪೇಲೋಡ್ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದೇ ಕಾರಣಕ್ಕೆ “ಬಾಹುಬಲಿ ರಾಕೆಟ್” ಎಂದು ಕರೆಯಲಾಗಿದೆ.
500 ಕೋಟಿ ರೂ. ವೆಚ್ಚ
ಈ ಮಿಷನ್ಗಾಗಿ ಸುಮಾರು 500 ಕೋಟಿ ರೂ ವೆಚ್ಚವಾಗಿದ್ದು, ಸಂಪೂರ್ಣವಾಗಿ “ಮೇಕ್ ಇನ್ ಇಂಡಿಯಾ” ಉಪಕ್ರಮದಡಿಯಲ್ಲೇ ಅಭಿವೃದ್ಧಿಪಡಿಸಲಾಗಿದೆ. ಬಾಹುಬಲಿ ರಾಕೆಟ್ ಅನ್ನು ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ” ಕಾರ್ಯಾಚರಣೆಯಲ್ಲೂ ಬಳಸಲಾಗುತ್ತಿದೆ.
ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹ
ಇಸ್ರೋ ಒದಗಿಸಿದ ಮಾಹಿತಿಯ ಪ್ರಕಾರ, “ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹವು CMS-03 ಭಾರತೀಯ ಮುಖ್ಯ ಭೂಭಾಗ ಸೇರಿದಂತೆ ವಿಶಾಲ ಸಮುದ್ರ ಪ್ರದೇಶಕ್ಕೆ ಸೇವೆಗಳನ್ನು ಒದಗಿಸುತ್ತದೆ. ಈ ಉಪಗ್ರಹ ‘C’, ‘Extended C’, ‘Q’ ಬ್ಯಾಂಡ್ಗಳಲ್ಲಿ ವಾಯ್ಸ್, ಡೇಟಾ ಮತ್ತು ವಿಡಿಯೋ ಲಿಂಕ್ಗಳಿಗೆ ಟ್ರಾನ್ಸ್ಪಾಂಡರ್ ಸೌಲಭ್ಯಗಳನ್ನು ಒದಗಿಸುತ್ತದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…