ಟೆಕ್‌

ಇಸ್ರೊ ಚಾರಿತ್ರಿಕ ಸಾಧನೆ ; ಕಕ್ಷೆ ಸೇರಿದ ಅತ್ಯಂತ ಭಾರದ ಉಪಗ್ರಹ

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಈ ರಾಕೆಟ್ ಉಡಾವಣೆಯಾಯಿತು. ಇದು ಇಲ್ಲಿಯವರೆಗೆ ಇಸ್ರೋ ಉಡಾಯಿಸಿದ ಅತ್ಯಂತ ಭಾರದ ಉಪಗ್ರಹ ಎಂಬುದು ಗಮನಾರ್ಹ. ಸಂಸ್ಥೆ 4,400 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿರುವುದು ಇದೇ ಮೊದಲು ಎಂದು ಇಸ್ರೋ ಪ್ರಕಟಣೆ ತಿಳಿಸಿದೆ.

ಈ ಉಪಗ್ರಹವು ಭಾರತೀಯ ಭೂಮಿ ಮತ್ತು ಸಮುದ್ರ ಪ್ರದೇಶಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತದೆ. ನೌಕಾಪಡೆಗೆ ಗಮನಾರ್ಹ ಪ್ರಯೋಜನ ನೀಡಲಿದೆ. ಹೆಚ್ಚು ಸಾಮರ್ಥ್ಯದ ಬ್ಯಾಂಡ್‌ವಿಡ್ತ್‌ಗೆ ಪ್ರವೇಶ ಒದಗಿಸುತ್ತದೆ. ದೂರದ ಪ್ರದೇಶಗಳಿಗೆ ಡಿಜಿಟಲ್ ಸಂಪರ್ಕವನ್ನು ಸುಗಮಗೊಳಿಸುತ್ತದೆ.

ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

‘ಬಾಹುಬಲಿ’ ಗಾತ್ರದ ರಾಕೆಟ್
43.5 ಮೀಟರ್ ಉದ್ದದ ರಾಕೆಟ್ 8,000 ಕೆ.ಜಿ ತೂಕದ ಪೇಲೋಡ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದೇ ಕಾರಣಕ್ಕೆ “ಬಾಹುಬಲಿ ರಾಕೆಟ್” ಎಂದು ಕರೆಯಲಾಗಿದೆ.

500 ಕೋಟಿ ರೂ. ವೆಚ್ಚ
ಈ ಮಿಷನ್‌ಗಾಗಿ ಸುಮಾರು 500 ಕೋಟಿ ರೂ ವೆಚ್ಚವಾಗಿದ್ದು, ಸಂಪೂರ್ಣವಾಗಿ “ಮೇಕ್ ಇನ್ ಇಂಡಿಯಾ” ಉಪಕ್ರಮದಡಿಯಲ್ಲೇ ಅಭಿವೃದ್ಧಿಪಡಿಸಲಾಗಿದೆ. ಬಾಹುಬಲಿ ರಾಕೆಟ್ ಅನ್ನು ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ” ಕಾರ್ಯಾಚರಣೆಯಲ್ಲೂ ಬಳಸಲಾಗುತ್ತಿದೆ.

ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹ
ಇಸ್ರೋ ಒದಗಿಸಿದ ಮಾಹಿತಿಯ ಪ್ರಕಾರ, “ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹವು CMS-03 ಭಾರತೀಯ ಮುಖ್ಯ ಭೂಭಾಗ ಸೇರಿದಂತೆ ವಿಶಾಲ ಸಮುದ್ರ ಪ್ರದೇಶಕ್ಕೆ ಸೇವೆಗಳನ್ನು ಒದಗಿಸುತ್ತದೆ. ಈ ಉಪಗ್ರಹ ‘C’, ‘Extended C’, ‘Q’ ಬ್ಯಾಂಡ್‌ಗಳಲ್ಲಿ ವಾಯ್ಸ್​, ಡೇಟಾ ಮತ್ತು ವಿಡಿಯೋ ಲಿಂಕ್‌ಗಳಿಗೆ ಟ್ರಾನ್ಸ್‌ಪಾಂಡರ್ ಸೌಲಭ್ಯಗಳನ್ನು ಒದಗಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

9 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

10 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

10 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

10 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

10 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

10 hours ago