ಟೆಕ್‌

ಇಸ್ರೊ ಚಾರಿತ್ರಿಕ ಸಾಧನೆ ; ಕಕ್ಷೆ ಸೇರಿದ ಅತ್ಯಂತ ಭಾರದ ಉಪಗ್ರಹ

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಈ ರಾಕೆಟ್ ಉಡಾವಣೆಯಾಯಿತು. ಇದು ಇಲ್ಲಿಯವರೆಗೆ ಇಸ್ರೋ ಉಡಾಯಿಸಿದ ಅತ್ಯಂತ ಭಾರದ ಉಪಗ್ರಹ ಎಂಬುದು ಗಮನಾರ್ಹ. ಸಂಸ್ಥೆ 4,400 ಕೆ.ಜಿ ತೂಕದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿರುವುದು ಇದೇ ಮೊದಲು ಎಂದು ಇಸ್ರೋ ಪ್ರಕಟಣೆ ತಿಳಿಸಿದೆ.

ಈ ಉಪಗ್ರಹವು ಭಾರತೀಯ ಭೂಮಿ ಮತ್ತು ಸಮುದ್ರ ಪ್ರದೇಶಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತದೆ. ನೌಕಾಪಡೆಗೆ ಗಮನಾರ್ಹ ಪ್ರಯೋಜನ ನೀಡಲಿದೆ. ಹೆಚ್ಚು ಸಾಮರ್ಥ್ಯದ ಬ್ಯಾಂಡ್‌ವಿಡ್ತ್‌ಗೆ ಪ್ರವೇಶ ಒದಗಿಸುತ್ತದೆ. ದೂರದ ಪ್ರದೇಶಗಳಿಗೆ ಡಿಜಿಟಲ್ ಸಂಪರ್ಕವನ್ನು ಸುಗಮಗೊಳಿಸುತ್ತದೆ.

ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

‘ಬಾಹುಬಲಿ’ ಗಾತ್ರದ ರಾಕೆಟ್
43.5 ಮೀಟರ್ ಉದ್ದದ ರಾಕೆಟ್ 8,000 ಕೆ.ಜಿ ತೂಕದ ಪೇಲೋಡ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದೇ ಕಾರಣಕ್ಕೆ “ಬಾಹುಬಲಿ ರಾಕೆಟ್” ಎಂದು ಕರೆಯಲಾಗಿದೆ.

500 ಕೋಟಿ ರೂ. ವೆಚ್ಚ
ಈ ಮಿಷನ್‌ಗಾಗಿ ಸುಮಾರು 500 ಕೋಟಿ ರೂ ವೆಚ್ಚವಾಗಿದ್ದು, ಸಂಪೂರ್ಣವಾಗಿ “ಮೇಕ್ ಇನ್ ಇಂಡಿಯಾ” ಉಪಕ್ರಮದಡಿಯಲ್ಲೇ ಅಭಿವೃದ್ಧಿಪಡಿಸಲಾಗಿದೆ. ಬಾಹುಬಲಿ ರಾಕೆಟ್ ಅನ್ನು ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ” ಕಾರ್ಯಾಚರಣೆಯಲ್ಲೂ ಬಳಸಲಾಗುತ್ತಿದೆ.

ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹ
ಇಸ್ರೋ ಒದಗಿಸಿದ ಮಾಹಿತಿಯ ಪ್ರಕಾರ, “ಮಲ್ಟಿ-ಬ್ಯಾಂಡ್ ಸಂವಹನ ಉಪಗ್ರಹವು CMS-03 ಭಾರತೀಯ ಮುಖ್ಯ ಭೂಭಾಗ ಸೇರಿದಂತೆ ವಿಶಾಲ ಸಮುದ್ರ ಪ್ರದೇಶಕ್ಕೆ ಸೇವೆಗಳನ್ನು ಒದಗಿಸುತ್ತದೆ. ಈ ಉಪಗ್ರಹ ‘C’, ‘Extended C’, ‘Q’ ಬ್ಯಾಂಡ್‌ಗಳಲ್ಲಿ ವಾಯ್ಸ್​, ಡೇಟಾ ಮತ್ತು ವಿಡಿಯೋ ಲಿಂಕ್‌ಗಳಿಗೆ ಟ್ರಾನ್ಸ್‌ಪಾಂಡರ್ ಸೌಲಭ್ಯಗಳನ್ನು ಒದಗಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

57 mins ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

1 hour ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago